ಬ್ರೇಕಿಂಗ್ ನ್ಯೂಸ್
05-05-25 01:30 pm HK News Desk ಕರ್ನಾಟಕ
ಹಾಸನ, ಮೇ 05: ಹೆಡ್ ಕಾನ್ಸ್ಟೇಬಲ್ನಿಂದಲೇ ಮೀಟರ್ ಬಡ್ಡಿ ದಂಧೆ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯಲ್ಲಿ ನಡೆದಿದೆ. ಬಾಳ್ಳುಪೇಟೆಯ ಮೊಹಮ್ಮದ್ ತನ್ಜೀರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಹಾಸನ ಎಸ್ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ ಕಾನ್ಸ್ಟೇಬಲ್ ಅರುಣ್ ವಿರುದ್ಧ ಮೀಟರ್ ಬಡ್ಡಿ ದಂಧೆ ಆರೋಪ ಕೇಳಿಬಂದಿದೆ.
80 ಸಾವಿರ ರೂ.ಗೆ 2 ಲಕ್ಷ ರೂ ಬಡ್ಡಿ ;
ಮೊಹಮ್ಮದ್ ತನ್ಜೀರ್ 2 ವರ್ಷದ ಹಿಂದೆ ಕೋಳಿ ಅಂಗಡಿ ಮಾಡಲು ಹೆಡ್ ಕಾನ್ಸ್ಟೇಬಲ್ ಅರುಣ್ ಬಳಿ ಸಾಲ ಪಡೆದಿದ್ದರು. 80 ಸಾವಿರ ರೂ ಹಣಕ್ಕೆ ವಾರಕ್ಕೆ 7,800 ರೂ. ಬಡ್ಡಿ ವಸೂಲಿ ಮಾಡಲಾಗುತ್ತಿತ್ತು. ತಿಂಗಳಿಗೆ 28 ಸಾವಿರ ರೂ. ಬಡ್ಡಿ ಕಟ್ಟಿ ತನ್ಜೀರ್ ಹೈರಾಣಾಗಿದ್ದರು. 80 ಸಾವಿರ ರೂ.ಗೆ 2 ಲಕ್ಷ ರೂ ಬಡ್ಡಿ ಕಟ್ಟಿದ್ರೂ ಬಿಡದೆ ಕಿರುಕುಳ ನೀಡುತ್ತಿರುವುದಾಗಿ ತನ್ಜೀರ್ ಆರೋಪಿಸಿದ್ದಾರೆ.
ಅರುಣ್ಗೆ ಬಡ್ಡಿ ಕಟ್ಟುವುದಕ್ಕಾಗಿ ತನ್ಜೀರ್ ವಕೀಲ ದುಶ್ಯತ್ ಸೇರಿ ಹಲವರಿಂದ ಸಾಲ ಪಡೆದಿದ್ದರು. ಎರಡು ವಾರದಿಂದ ಬಡ್ಡಿ ಕಟ್ಟದಿದ್ದಕ್ಕೆ ತನ್ಜೀರ್ಗೆ ಕಿರುಕುಳ ನೀಡಲಾಗಿದೆ. ಒಟ್ಟು 5 ಲಕ್ಷ ರೂ. ಸಾಲ ಮಾಡಿದ್ದ ತನ್ಜೀರ್, ಸಾಲಕ್ಕೆ ಬಡ್ಡಿ ಕಟ್ಟಲಾಗದೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡ ತನ್ಜೀರ್ಗೆ ಹಾಸನದ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮೀಟರ್ ಬಡ್ಡಿ ಆರೋಪ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.
ರಾಜ್ಯ ಸರ್ಕಾರ ಇತ್ತೀಚೆಗೆ ಸುಗ್ರೀವಾಜ್ಞೆ ಹೊರಡಿಸಿದರು ಕೂಡ ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ಗಳ ಕಿರುಕುಳ ಮಾತ್ರ ಇನ್ನೂ ನಿಂತಿಲ್ಲ. ಅದೆಷ್ಟೋ ಬಡ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಹಾವೇರಿ ಜಿಲ್ಲೆಯಲ್ಲಿ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದರು.
Hassan Head Constable Runs Loan Shark Racket, Man Attempts Suicide Over Harassment by police constable Arun, who works at the SP office. Tanveer is the man who attempted suicide.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm