ಬ್ರೇಕಿಂಗ್ ನ್ಯೂಸ್
05-05-25 01:30 pm HK News Desk ಕರ್ನಾಟಕ
ಹಾಸನ, ಮೇ 05: ಹೆಡ್ ಕಾನ್ಸ್ಟೇಬಲ್ನಿಂದಲೇ ಮೀಟರ್ ಬಡ್ಡಿ ದಂಧೆ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯಲ್ಲಿ ನಡೆದಿದೆ. ಬಾಳ್ಳುಪೇಟೆಯ ಮೊಹಮ್ಮದ್ ತನ್ಜೀರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಹಾಸನ ಎಸ್ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ ಕಾನ್ಸ್ಟೇಬಲ್ ಅರುಣ್ ವಿರುದ್ಧ ಮೀಟರ್ ಬಡ್ಡಿ ದಂಧೆ ಆರೋಪ ಕೇಳಿಬಂದಿದೆ.
80 ಸಾವಿರ ರೂ.ಗೆ 2 ಲಕ್ಷ ರೂ ಬಡ್ಡಿ ;
ಮೊಹಮ್ಮದ್ ತನ್ಜೀರ್ 2 ವರ್ಷದ ಹಿಂದೆ ಕೋಳಿ ಅಂಗಡಿ ಮಾಡಲು ಹೆಡ್ ಕಾನ್ಸ್ಟೇಬಲ್ ಅರುಣ್ ಬಳಿ ಸಾಲ ಪಡೆದಿದ್ದರು. 80 ಸಾವಿರ ರೂ ಹಣಕ್ಕೆ ವಾರಕ್ಕೆ 7,800 ರೂ. ಬಡ್ಡಿ ವಸೂಲಿ ಮಾಡಲಾಗುತ್ತಿತ್ತು. ತಿಂಗಳಿಗೆ 28 ಸಾವಿರ ರೂ. ಬಡ್ಡಿ ಕಟ್ಟಿ ತನ್ಜೀರ್ ಹೈರಾಣಾಗಿದ್ದರು. 80 ಸಾವಿರ ರೂ.ಗೆ 2 ಲಕ್ಷ ರೂ ಬಡ್ಡಿ ಕಟ್ಟಿದ್ರೂ ಬಿಡದೆ ಕಿರುಕುಳ ನೀಡುತ್ತಿರುವುದಾಗಿ ತನ್ಜೀರ್ ಆರೋಪಿಸಿದ್ದಾರೆ.
ಅರುಣ್ಗೆ ಬಡ್ಡಿ ಕಟ್ಟುವುದಕ್ಕಾಗಿ ತನ್ಜೀರ್ ವಕೀಲ ದುಶ್ಯತ್ ಸೇರಿ ಹಲವರಿಂದ ಸಾಲ ಪಡೆದಿದ್ದರು. ಎರಡು ವಾರದಿಂದ ಬಡ್ಡಿ ಕಟ್ಟದಿದ್ದಕ್ಕೆ ತನ್ಜೀರ್ಗೆ ಕಿರುಕುಳ ನೀಡಲಾಗಿದೆ. ಒಟ್ಟು 5 ಲಕ್ಷ ರೂ. ಸಾಲ ಮಾಡಿದ್ದ ತನ್ಜೀರ್, ಸಾಲಕ್ಕೆ ಬಡ್ಡಿ ಕಟ್ಟಲಾಗದೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡ ತನ್ಜೀರ್ಗೆ ಹಾಸನದ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮೀಟರ್ ಬಡ್ಡಿ ಆರೋಪ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.
ರಾಜ್ಯ ಸರ್ಕಾರ ಇತ್ತೀಚೆಗೆ ಸುಗ್ರೀವಾಜ್ಞೆ ಹೊರಡಿಸಿದರು ಕೂಡ ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ಗಳ ಕಿರುಕುಳ ಮಾತ್ರ ಇನ್ನೂ ನಿಂತಿಲ್ಲ. ಅದೆಷ್ಟೋ ಬಡ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಹಾವೇರಿ ಜಿಲ್ಲೆಯಲ್ಲಿ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದರು.
Hassan Head Constable Runs Loan Shark Racket, Man Attempts Suicide Over Harassment by police constable Arun, who works at the SP office. Tanveer is the man who attempted suicide.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am