ಬ್ರೇಕಿಂಗ್ ನ್ಯೂಸ್
05-05-25 01:30 pm HK News Desk ಕರ್ನಾಟಕ
ಹಾಸನ, ಮೇ 05: ಹೆಡ್ ಕಾನ್ಸ್ಟೇಬಲ್ನಿಂದಲೇ ಮೀಟರ್ ಬಡ್ಡಿ ದಂಧೆ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯಲ್ಲಿ ನಡೆದಿದೆ. ಬಾಳ್ಳುಪೇಟೆಯ ಮೊಹಮ್ಮದ್ ತನ್ಜೀರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಹಾಸನ ಎಸ್ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ ಕಾನ್ಸ್ಟೇಬಲ್ ಅರುಣ್ ವಿರುದ್ಧ ಮೀಟರ್ ಬಡ್ಡಿ ದಂಧೆ ಆರೋಪ ಕೇಳಿಬಂದಿದೆ.
80 ಸಾವಿರ ರೂ.ಗೆ 2 ಲಕ್ಷ ರೂ ಬಡ್ಡಿ ;
ಮೊಹಮ್ಮದ್ ತನ್ಜೀರ್ 2 ವರ್ಷದ ಹಿಂದೆ ಕೋಳಿ ಅಂಗಡಿ ಮಾಡಲು ಹೆಡ್ ಕಾನ್ಸ್ಟೇಬಲ್ ಅರುಣ್ ಬಳಿ ಸಾಲ ಪಡೆದಿದ್ದರು. 80 ಸಾವಿರ ರೂ ಹಣಕ್ಕೆ ವಾರಕ್ಕೆ 7,800 ರೂ. ಬಡ್ಡಿ ವಸೂಲಿ ಮಾಡಲಾಗುತ್ತಿತ್ತು. ತಿಂಗಳಿಗೆ 28 ಸಾವಿರ ರೂ. ಬಡ್ಡಿ ಕಟ್ಟಿ ತನ್ಜೀರ್ ಹೈರಾಣಾಗಿದ್ದರು. 80 ಸಾವಿರ ರೂ.ಗೆ 2 ಲಕ್ಷ ರೂ ಬಡ್ಡಿ ಕಟ್ಟಿದ್ರೂ ಬಿಡದೆ ಕಿರುಕುಳ ನೀಡುತ್ತಿರುವುದಾಗಿ ತನ್ಜೀರ್ ಆರೋಪಿಸಿದ್ದಾರೆ.
ಅರುಣ್ಗೆ ಬಡ್ಡಿ ಕಟ್ಟುವುದಕ್ಕಾಗಿ ತನ್ಜೀರ್ ವಕೀಲ ದುಶ್ಯತ್ ಸೇರಿ ಹಲವರಿಂದ ಸಾಲ ಪಡೆದಿದ್ದರು. ಎರಡು ವಾರದಿಂದ ಬಡ್ಡಿ ಕಟ್ಟದಿದ್ದಕ್ಕೆ ತನ್ಜೀರ್ಗೆ ಕಿರುಕುಳ ನೀಡಲಾಗಿದೆ. ಒಟ್ಟು 5 ಲಕ್ಷ ರೂ. ಸಾಲ ಮಾಡಿದ್ದ ತನ್ಜೀರ್, ಸಾಲಕ್ಕೆ ಬಡ್ಡಿ ಕಟ್ಟಲಾಗದೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡ ತನ್ಜೀರ್ಗೆ ಹಾಸನದ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮೀಟರ್ ಬಡ್ಡಿ ಆರೋಪ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.
ರಾಜ್ಯ ಸರ್ಕಾರ ಇತ್ತೀಚೆಗೆ ಸುಗ್ರೀವಾಜ್ಞೆ ಹೊರಡಿಸಿದರು ಕೂಡ ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ಗಳ ಕಿರುಕುಳ ಮಾತ್ರ ಇನ್ನೂ ನಿಂತಿಲ್ಲ. ಅದೆಷ್ಟೋ ಬಡ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಹಾವೇರಿ ಜಿಲ್ಲೆಯಲ್ಲಿ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದರು.
Hassan Head Constable Runs Loan Shark Racket, Man Attempts Suicide Over Harassment by police constable Arun, who works at the SP office. Tanveer is the man who attempted suicide.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am