ಬ್ರೇಕಿಂಗ್ ನ್ಯೂಸ್
06-05-25 08:18 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 6 : ಭಾರೀ ಸಂಚಲನ ಸೃಷ್ಟಿಸಿದ್ದ ಓಬಳಾಪುರಂ ಮೈನಿಂಗ್ ಕಂಪನಿ(ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿದೆ.
ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ವಾದ ಆಲಿಸಿದ್ದ ಹೈದರಾಬಾದ್ ಸಿಬಿಐ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು. ಮೇ 6ರಂದು ತೀರ್ಪು ಪ್ರಕಟಿಸಿದ ಕೋರ್ಟ್, ಒಎಂಸಿ ಕಂಪನಿ ಮಾಲೀಕ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂನಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧಿಸಿ ಬರೋಬ್ಬರಿ 13 ವರ್ಷಗಳಿಂದ ನಡೆದ ಸುದೀರ್ಘ ವಿಚಾರಣೆ ಪ್ರಕ್ರಿಯೆಯಲ್ಲಿ ಸಿಬಿಐ ಒದಗಿಸಿದ್ದ 3,400ಕ್ಕೂ ಹೆಚ್ಚು ದಾಖಲೆಗಳನ್ನು ಪರಿಶೀಲಿಸಿ, 219 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿ ಕೋರ್ಟ್ ತೀರ್ಪು ನೀಡಿದೆ.
ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಇದೇ ಪ್ರಕರಣದಲ್ಲಿ ವಿ.ಡಿ.ರಾಜಗೋಪಾಲ್, ದಿ. ರಾವ್ ಲಿಂಗಾರೆಡ್ಡಿ, ಕೆ.ಮೆಹಫೂಸ್ ಅಲಿ ಖಾನ್ ಕೂಡ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದೆ.
ಶಾಸಕ ಜನಾರ್ದನ ರೆಡ್ಡಿ, ಬಿ.ವಿ ಶ್ರೀನಿವಾಸ ರೆಡ್ಡಿ (ಒಎಂಸಿ ವ್ಯವಸ್ಥಾಪಕ ನಿರ್ದೇಶಕ), ಮೆಫಾಜ್ ಅಲಿ ಖಾನ್ (ಜನಾರ್ದನ ರೆಡ್ಡಿ ಆಪ್ತ ಸಹಾಯಕ), ವಿ.ಡಿ ರಾಜಗೋಪಾಲ್ (ಗಣಿ ಇಲಾಖೆಯ ಮಾಜಿ ನಿರ್ದೇಶಕ), ಕೃಪಾನಂದಂ (ನಿವೃತ್ತ ಐಎಎಸ್ ಅಧಿಕಾರಿ), ಸಬಿತಾ ಇಂದ್ರಾರೆಡ್ಡಿ (ತೆಲಂಗಾಣದ ಮಾಜಿ ಸಚಿವೆ ಹಾಗೂ ಹಾಲಿ ಶಾಸಕಿ), ವೈ. ಶ್ರೀಲಕ್ಷ್ಮಿ (2022ರಲ್ಲಿ ಸೇವೆಯಿಂದ ಬಿಡುಗಡೆಯಾದ ಐಎಎಸ್ ಅಧಿಕಾರಿ) ಮತ್ತು ದಿವಂಗತ ಆರ್. ಲಿಂಗಾ ರೆಡ್ಡಿ (ಅಂದಿನ ಗಣಿ ಇಲಾಖೆಯ ಸಹಾಯಕ ನಿರ್ದೇಶಕ) ಈ ಪ್ರಕರಣದ ಆರೋಪಿಗಳಾಗಿದ್ದಾರೆ. ಇವರ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 420, 409, 468 ಮತ್ತು 471 ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13(2) ಜೊತೆಗೆ 13(1)(ಡಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
2009 ರಲ್ಲಿ ಸಿಬಿಐ ಒಎಂಸಿ ಕಂಪನಿಯ ಅಕ್ರಮ ಗಣಿಗಾರಿಕೆ ಆರೋಪ ಸಂಬಂಧ ತನಿಖೆ ಪ್ರಾರಂಭಿಸಿತ್ತು. ವೈ.ಎಸ್. ರಾಜಶೇಖರ ರೆಡ್ಡಿ ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಗಾಲಿ ಜನಾರ್ದನ ರೆಡ್ಡಿ ಅವರ ಒಎಂಸಿ ಕಂಪನಿಗೆ ಓಬಳಾಪುರಂ ಮತ್ತು ಡಿ. ಹಿರೇಹಾಳದಲ್ಲಿ ಕ್ರಮವಾಗಿ 68.5 ಹೆಕ್ಟೇರ್ ಮತ್ತು 39.5 ಹೆಕ್ಟೇರ್ ಪ್ರದೇಶದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ಗುತ್ತಿಗೆ ನೀಡುವಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಕೇಳಿಬಂದಿತ್ತು.
A CBI court in Telangana’s Nampally on Tuesday convicted former Karnataka Minister Gali Janardhan Reddy and three others in the long-standing Obulapuram illegal mining case.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am