ಬ್ರೇಕಿಂಗ್ ನ್ಯೂಸ್
06-05-25 11:23 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 06 : ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ಏರ್ಪಟ್ಟಿದ್ದು ಈ ಮಧ್ಯೆ ದೇಶಾದ್ಯಂತ 244 ಜಿಲ್ಲೆಗಳಲ್ಲಿ ಭಾರತೀಯ ಸೇನೆಯು ಮೇ 7 ರಂದು ನಾಗರಿಕ ರಕ್ಷಣಾ ಅಣಕು ಕವಾಯತು ಆಯೋಜಿಸಿದೆ. ಇದೇ ವೇಳೆ, ಕೆಲವು ಪ್ರದೇಶಗಳಲ್ಲಿ ನಡೆಯಬೇಕಿದ್ದ ಮಾಕ್ ಡ್ರಿಲ್ ಮುಂದೂಡಲಾಗಿದೆ. ಕರ್ನಾಟಕದ ಮೂರು ಕಡೆ ನಿಗದಿಯಾಗಿದ್ದ ಕವಾಯತನ್ನು ಬೆಂಗಳೂರಿನಲ್ಲಿ ಮಾತ್ರ ನಡೆಸಲು ನಿರ್ಧರಿಸಲಾಗಿದೆ.
ಉತ್ತರ ಕನ್ನಡ (ಕಾರವಾರ) ಮತ್ತು ರಾಯಚೂರು ಜಿಲ್ಲೆಗಳಲ್ಲಿ ಯೋಜಿತವಾಗಿದ್ದ ಮಾಕ್ ಡ್ರಿಲ್ಗಳನ್ನು ಮುಂದೂಡಲಾಗಿದೆ. ಈ ಬಗ್ಗೆ ಜಿಲ್ಲಾಡಳಿತ, ಗೃಹ ರಕ್ಷಕ ದಳ, ಮತ್ತು ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಬೆಂಗಳೂರು ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗೃಹ ರಕ್ಷಕ ದಳ, ಅಗ್ನಿಶಾಮಕ ಇಲಾಖೆ, ಮತ್ತು ಜಿಲ್ಲಾಡಳಿತದ ಸಹಭಾಗಿತ್ವ ಇರಲಿದೆ. ನಾಗರಿಕರ ಸುರಕ್ಷತೆ ಮತ್ತು ತುರ್ತು ಪರಿಸ್ಥಿತಿಗಳಿಗೆ ಸಿದ್ಧತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಕವಾಯತು ಆಯೋಜಿಸಲಾಗಿದೆ.
ಕಾರವಾರದಲ್ಲಿ ಮುಂದೂಡಿಕೆ ; ಡೀಸಿ
ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆ ಮತ್ತು ಕೈಗಾ ಅಣುವಿದ್ಯುತ್ ಸ್ಥಾವರದ ಆಸುಪಾಸಿನ ಗ್ರಾಮಗಳಲ್ಲಿ ನಡೆಯಬೇಕಿದ್ದ ಮಾಕ್ ಡ್ರಿಲ್ ಅನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಈ ಬಗ್ಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಮಾಹಿತಿ ನೀಡಿದ್ದು, ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.
ಗೃಹ ಇಲಾಖೆ ಸೂಚನೆಯಿಂದ ಮುಂದೂಡಿಕೆ
ರಾಯಚೂರಿನಲ್ಲಿ ನಡೆಯಬೇಕಿದ್ದ ಮಾಕ್ ಡ್ರಿಲ್ ಅನ್ನು ಕೇಂದ್ರ ಗೃಹ ಇಲಾಖೆಯ ಸೂಚನೆಯಂತೆ ಮುಂದೂಡಲಾಗಿದೆ. ದೇಶದ 244 ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಆಯೋಜಿಸುವ ಯೋಜನೆಯ ಭಾಗವಾಗಿ, ಜಿಲ್ಲೆಗಳನ್ನು ಸೂಕ್ಷ್ಮತೆಯ ಆಧಾರದ ಮೇಲೆ ವರ್ಗ-1, ವರ್ಗ-2, ಮತ್ತು ವರ್ಗ-3 ಎಂದು ವಿಂಗಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಯಚೂರಿನ ಮಾಕ್ ಡ್ರಿಲ್ ಅನ್ನು ಮುಂದಿನ ಒಂದು ವಾರದೊಳಗೆ ನಿಗದಿಪಡಿಸಲು ತೀರ್ಮಾನಿಸಲಾಗಿದೆ.
ಕೇಂದ್ರ ಗೃಹ ಇಲಾಖೆಯ ಮಾರ್ಗಸೂಚಿಯಂತೆ, ಮುಂದಿನ ಒಂದು ವಾರದೊಳಗೆ ರಾಯಚೂರು, ಕಾರವಾರ ಸೇರಿದಂತೆ ಮುಂದೂಡಲಾದ ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ಗೆ ದಿನಾಂಕ ನಿಗದಿಪಡಿಸಲಾಗುವುದು. ಈ ಅಭ್ಯಾಸಗಳು ದೇಶದ ಸುರಕ್ಷತೆ ಮತ್ತು ತುರ್ತು ಸನ್ನಿವೇಶಗಳಿಗೆ ಸಿದ್ಧತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿವೆ.
ಬೆಂಗಳೂರಿನಲ್ಲಿ 35 ಕಡೆ ಸೈರನ್ !
ಬೆಂಗಳೂರಿನಲ್ಲಿ ರಕ್ಷಣಾ ಕವಾಯತು ಅಂಗವಾಗಿ 35 ಕಡೆ ಸೈರನ್ ಮೊಳಗಲಿದೆ ಎನ್ನುವ ಮಾಹಿತಿಯಿದೆ. ರಕ್ಷಣಾ ಇಲಾಖೆಯ ಕಚೇರಿ, ಐಟಿ ಫೀಲ್ಡ್ ಸೇರಿದಂತೆ ಪ್ರಮುಖ ಪ್ರದೇಶಗಳನ್ನು ಗುರಿಯಾಗಿಸಿ ತುರ್ತು ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ಹೇಗಿರಬೇಕು ಮತ್ತು ಜನರು ಯಾವೆಲ್ಲ ಮುಂಜಾಗ್ರತೆ ವಹಿಸಬೇಕು ಎನ್ನುವ ಬಗ್ಗೆ ಸೂಚನೆ ನೀಡಲಿದ್ದಾರೆ. ಇದರಲ್ಲಿ ಎನ್ ಸಿಸಿ, ಎನ್ನೆಸ್ಸೆಸ್ ಸೇರಿದಂತೆ ವಿದ್ಯಾರ್ಥಿಗಳನ್ನೂ ತೊಡಗಿಸಲಿದ್ದಾರೆ.
Mock drills will be conducted in Bengaluru, Karwar, and Raichur on May 7, given the "new and complex threats" that have emerged amid rising tensions with Pakistan following the Pahalgam terror attack.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm