ಬ್ರೇಕಿಂಗ್ ನ್ಯೂಸ್
08-05-25 12:23 pm HK News Desk ಕರ್ನಾಟಕ
ಕಾರವಾರ, ಮೇ 7 : ಪಾಕಿಸ್ತಾನ ಮೇಲೆ ಸರ್ಜಿಕಲ್ ದಾಳಿ ನಡೆಸಿದ ಬೆನ್ನಲ್ಲೇ ರಾಜ್ಯದ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಭಾರತದ ಅತಿದೊಡ್ಡ ನೌಕಾನೆಲೆ ಎನಿಸಿರುವ ಕಾರವಾರದ ಕದಂಬ ನೌಕಾನೆಲೆ ಮತ್ತು ಕಾರವಾರ ಬಂದರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಕಾರವಾರದ ಅರಗಾದಲ್ಲಿರುವ ಕದಂಬ ನೌಕಾ ನೆಲೆಯಲ್ಲಿ ಕರಾವಳಿ ಕಾವಲುಪಡೆ, ಭಾರತೀಯ ತಟರಕ್ಷಕ ದಳದಿಂದ ತಪಾಸಣೆ ಹೆಚ್ಚಿಸಲಾಗಿದೆ. ಇದೇ ವೇಳೆ, ಅನ್ಯ ದೇಶದಿಂದ ಬರುವ ಸರಕು ಸಾಗಾಟ ಹಡಗಿನಲ್ಲಿ ಚೀನಾ, ಪಾಕಿಸ್ತಾನ ಸಿಬ್ಬಂದಿಗಳಿದ್ದರೆ ಅಂತಹ ಹಡಗುಗಳಿಗೆ ಬಂದರಿನಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ.
ಯಾವುದೇ ದೇಶದ ಹಡಗಿನಲ್ಲಿ ಪಾಕಿಸ್ತಾನ, ಚೀನಾ ಸಿಬ್ಬಂದಿ ಇದ್ದರೆ ಅಂತಹ ಹಡಗುಗಳಿಗೆ ಕಾರವಾರ ಬಂದರಿನಲ್ಲಿ ನಿಲುಗಡೆಗೆ ನಿಷೇಧ ವಿಧಿಸಲಾಗಿದೆ. ಮೀನುಗಾರಿಕಾ ಬಂದರಿಗೆ ಬರುವ ಬೋಟ್, ಹಡಗುಗಳಲ್ಲಿ ಪೊಲೀಸರು ತೀವ್ರ ತಪಾಸಣೆ ಕೈಗೊಂಡಿದ್ದಾರೆ. ಎಲ್ಲ ಮಾದರಿಯ ಮೀನುಗಾರಿಕಾ ಬೋಟ್ ಗಳನ್ನೂ ಅಪರಿಚಿತ ವ್ಯಕ್ತಿಗಳಿದ್ದರೆ ಕರಾವಳಿ ಕಾವಲು ಪಡೆ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.
ಇದಲ್ಲದೆ, ಸಮುದ್ರದಲ್ಲಿ 12 ನಾಟಿಕಲ್ ಮೈಲ್ ದೂರದಿಂದ ಹೊರಕ್ಕೆ ಹೋಗದಂತೆ ಆಳ ಸಮುದ್ರ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ತೀರದಿಂದ 200 ಕಿಮೀ ದೂರದ ನಂತರ ಅಂತಾರಾಷ್ಟ್ರೀಯ ಮಟ್ಟದ ಜಲಸಂಚಾರ ಇರಲಿದ್ದು ಅಲ್ಲಿ ಪಾಕಿಸ್ತಾನ ಸೇರಿದಂತೆ ಯಾವುದೇ ದೇಶದ ಹಡಗು, ಬೋಟ್ಗಳು ಸಂಚರಿಸಬಹುದು. ಪಾಕಿಗಳ ಕೈಗೆ ಸಿಕ್ಕಿಬಿದ್ದು ಒದ್ದಾಡುವ ಬದಲು ಅಲ್ಲಿ ವರೆಗೆ ಹೋಗುವುದನ್ನು ತಪ್ಪಿಸಿ ಎಂದು ಮೀನುಗಾರರಿಗೆ ಸೂಚನೆ ನೀಡಲಾಗಿದೆ.
ಸಾಮಾನ್ಯವಾಗಿ ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳಿದವರು 150- 200 ಕಿಮೀ ಗಡಿರೇಖೆಯ ವರೆಗೂ ಸಂಚಾರ ಮಾಡುತ್ತಾರೆ. ಸದ್ಯಕ್ಕೆ ಪಾಕಿಸ್ತಾನದ ಜೊತೆಗೆ ಸಂಘರ್ಷ ವಾತಾವರಣ ಇರುವುದರಿಂದ ಭಾರತದ ಮೀನುಗಾರರು ಅಲ್ಲಿ ವರೆಗೂ ತೆರಳದಂತೆ ಮೀನುಗಾರಿಕಾ ಇಲಾಖೆ ಸೂಚನೆ ನೀಡಿದೆ.
High Alert in Karwar, Fishermen Barred from Going Beyond 12 Nautical Miles; Foreign Vessels with Chinese or Pakistani Crew Restricted.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
18-09-25 07:40 pm
Mangalore Correspondent
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
ಪೊಲೀಸರಿಂದ ಅಧಿಕಾರ ದುರುಪಯೋಗ, ದಬ್ಬಾಳಿಕೆ ; ಬೆನ್ನು...
18-09-25 04:31 pm
Mangalore, Traffic Police: ನಂಗೆ ಕೈಮಾಡಲು ನಿಂಗೇ...
18-09-25 02:42 pm
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm