ಬ್ರೇಕಿಂಗ್ ನ್ಯೂಸ್
08-05-25 12:23 pm HK News Desk ಕರ್ನಾಟಕ
ಕಾರವಾರ, ಮೇ 7 : ಪಾಕಿಸ್ತಾನ ಮೇಲೆ ಸರ್ಜಿಕಲ್ ದಾಳಿ ನಡೆಸಿದ ಬೆನ್ನಲ್ಲೇ ರಾಜ್ಯದ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಭಾರತದ ಅತಿದೊಡ್ಡ ನೌಕಾನೆಲೆ ಎನಿಸಿರುವ ಕಾರವಾರದ ಕದಂಬ ನೌಕಾನೆಲೆ ಮತ್ತು ಕಾರವಾರ ಬಂದರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಕಾರವಾರದ ಅರಗಾದಲ್ಲಿರುವ ಕದಂಬ ನೌಕಾ ನೆಲೆಯಲ್ಲಿ ಕರಾವಳಿ ಕಾವಲುಪಡೆ, ಭಾರತೀಯ ತಟರಕ್ಷಕ ದಳದಿಂದ ತಪಾಸಣೆ ಹೆಚ್ಚಿಸಲಾಗಿದೆ. ಇದೇ ವೇಳೆ, ಅನ್ಯ ದೇಶದಿಂದ ಬರುವ ಸರಕು ಸಾಗಾಟ ಹಡಗಿನಲ್ಲಿ ಚೀನಾ, ಪಾಕಿಸ್ತಾನ ಸಿಬ್ಬಂದಿಗಳಿದ್ದರೆ ಅಂತಹ ಹಡಗುಗಳಿಗೆ ಬಂದರಿನಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ.
ಯಾವುದೇ ದೇಶದ ಹಡಗಿನಲ್ಲಿ ಪಾಕಿಸ್ತಾನ, ಚೀನಾ ಸಿಬ್ಬಂದಿ ಇದ್ದರೆ ಅಂತಹ ಹಡಗುಗಳಿಗೆ ಕಾರವಾರ ಬಂದರಿನಲ್ಲಿ ನಿಲುಗಡೆಗೆ ನಿಷೇಧ ವಿಧಿಸಲಾಗಿದೆ. ಮೀನುಗಾರಿಕಾ ಬಂದರಿಗೆ ಬರುವ ಬೋಟ್, ಹಡಗುಗಳಲ್ಲಿ ಪೊಲೀಸರು ತೀವ್ರ ತಪಾಸಣೆ ಕೈಗೊಂಡಿದ್ದಾರೆ. ಎಲ್ಲ ಮಾದರಿಯ ಮೀನುಗಾರಿಕಾ ಬೋಟ್ ಗಳನ್ನೂ ಅಪರಿಚಿತ ವ್ಯಕ್ತಿಗಳಿದ್ದರೆ ಕರಾವಳಿ ಕಾವಲು ಪಡೆ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.
ಇದಲ್ಲದೆ, ಸಮುದ್ರದಲ್ಲಿ 12 ನಾಟಿಕಲ್ ಮೈಲ್ ದೂರದಿಂದ ಹೊರಕ್ಕೆ ಹೋಗದಂತೆ ಆಳ ಸಮುದ್ರ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ತೀರದಿಂದ 200 ಕಿಮೀ ದೂರದ ನಂತರ ಅಂತಾರಾಷ್ಟ್ರೀಯ ಮಟ್ಟದ ಜಲಸಂಚಾರ ಇರಲಿದ್ದು ಅಲ್ಲಿ ಪಾಕಿಸ್ತಾನ ಸೇರಿದಂತೆ ಯಾವುದೇ ದೇಶದ ಹಡಗು, ಬೋಟ್ಗಳು ಸಂಚರಿಸಬಹುದು. ಪಾಕಿಗಳ ಕೈಗೆ ಸಿಕ್ಕಿಬಿದ್ದು ಒದ್ದಾಡುವ ಬದಲು ಅಲ್ಲಿ ವರೆಗೆ ಹೋಗುವುದನ್ನು ತಪ್ಪಿಸಿ ಎಂದು ಮೀನುಗಾರರಿಗೆ ಸೂಚನೆ ನೀಡಲಾಗಿದೆ.
ಸಾಮಾನ್ಯವಾಗಿ ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳಿದವರು 150- 200 ಕಿಮೀ ಗಡಿರೇಖೆಯ ವರೆಗೂ ಸಂಚಾರ ಮಾಡುತ್ತಾರೆ. ಸದ್ಯಕ್ಕೆ ಪಾಕಿಸ್ತಾನದ ಜೊತೆಗೆ ಸಂಘರ್ಷ ವಾತಾವರಣ ಇರುವುದರಿಂದ ಭಾರತದ ಮೀನುಗಾರರು ಅಲ್ಲಿ ವರೆಗೂ ತೆರಳದಂತೆ ಮೀನುಗಾರಿಕಾ ಇಲಾಖೆ ಸೂಚನೆ ನೀಡಿದೆ.
High Alert in Karwar, Fishermen Barred from Going Beyond 12 Nautical Miles; Foreign Vessels with Chinese or Pakistani Crew Restricted.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm