ಬ್ರೇಕಿಂಗ್ ನ್ಯೂಸ್
08-05-25 12:23 pm HK News Desk ಕರ್ನಾಟಕ
ಕಾರವಾರ, ಮೇ 7 : ಪಾಕಿಸ್ತಾನ ಮೇಲೆ ಸರ್ಜಿಕಲ್ ದಾಳಿ ನಡೆಸಿದ ಬೆನ್ನಲ್ಲೇ ರಾಜ್ಯದ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಭಾರತದ ಅತಿದೊಡ್ಡ ನೌಕಾನೆಲೆ ಎನಿಸಿರುವ ಕಾರವಾರದ ಕದಂಬ ನೌಕಾನೆಲೆ ಮತ್ತು ಕಾರವಾರ ಬಂದರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಕಾರವಾರದ ಅರಗಾದಲ್ಲಿರುವ ಕದಂಬ ನೌಕಾ ನೆಲೆಯಲ್ಲಿ ಕರಾವಳಿ ಕಾವಲುಪಡೆ, ಭಾರತೀಯ ತಟರಕ್ಷಕ ದಳದಿಂದ ತಪಾಸಣೆ ಹೆಚ್ಚಿಸಲಾಗಿದೆ. ಇದೇ ವೇಳೆ, ಅನ್ಯ ದೇಶದಿಂದ ಬರುವ ಸರಕು ಸಾಗಾಟ ಹಡಗಿನಲ್ಲಿ ಚೀನಾ, ಪಾಕಿಸ್ತಾನ ಸಿಬ್ಬಂದಿಗಳಿದ್ದರೆ ಅಂತಹ ಹಡಗುಗಳಿಗೆ ಬಂದರಿನಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ.
ಯಾವುದೇ ದೇಶದ ಹಡಗಿನಲ್ಲಿ ಪಾಕಿಸ್ತಾನ, ಚೀನಾ ಸಿಬ್ಬಂದಿ ಇದ್ದರೆ ಅಂತಹ ಹಡಗುಗಳಿಗೆ ಕಾರವಾರ ಬಂದರಿನಲ್ಲಿ ನಿಲುಗಡೆಗೆ ನಿಷೇಧ ವಿಧಿಸಲಾಗಿದೆ. ಮೀನುಗಾರಿಕಾ ಬಂದರಿಗೆ ಬರುವ ಬೋಟ್, ಹಡಗುಗಳಲ್ಲಿ ಪೊಲೀಸರು ತೀವ್ರ ತಪಾಸಣೆ ಕೈಗೊಂಡಿದ್ದಾರೆ. ಎಲ್ಲ ಮಾದರಿಯ ಮೀನುಗಾರಿಕಾ ಬೋಟ್ ಗಳನ್ನೂ ಅಪರಿಚಿತ ವ್ಯಕ್ತಿಗಳಿದ್ದರೆ ಕರಾವಳಿ ಕಾವಲು ಪಡೆ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.
ಇದಲ್ಲದೆ, ಸಮುದ್ರದಲ್ಲಿ 12 ನಾಟಿಕಲ್ ಮೈಲ್ ದೂರದಿಂದ ಹೊರಕ್ಕೆ ಹೋಗದಂತೆ ಆಳ ಸಮುದ್ರ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ತೀರದಿಂದ 200 ಕಿಮೀ ದೂರದ ನಂತರ ಅಂತಾರಾಷ್ಟ್ರೀಯ ಮಟ್ಟದ ಜಲಸಂಚಾರ ಇರಲಿದ್ದು ಅಲ್ಲಿ ಪಾಕಿಸ್ತಾನ ಸೇರಿದಂತೆ ಯಾವುದೇ ದೇಶದ ಹಡಗು, ಬೋಟ್ಗಳು ಸಂಚರಿಸಬಹುದು. ಪಾಕಿಗಳ ಕೈಗೆ ಸಿಕ್ಕಿಬಿದ್ದು ಒದ್ದಾಡುವ ಬದಲು ಅಲ್ಲಿ ವರೆಗೆ ಹೋಗುವುದನ್ನು ತಪ್ಪಿಸಿ ಎಂದು ಮೀನುಗಾರರಿಗೆ ಸೂಚನೆ ನೀಡಲಾಗಿದೆ.
ಸಾಮಾನ್ಯವಾಗಿ ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳಿದವರು 150- 200 ಕಿಮೀ ಗಡಿರೇಖೆಯ ವರೆಗೂ ಸಂಚಾರ ಮಾಡುತ್ತಾರೆ. ಸದ್ಯಕ್ಕೆ ಪಾಕಿಸ್ತಾನದ ಜೊತೆಗೆ ಸಂಘರ್ಷ ವಾತಾವರಣ ಇರುವುದರಿಂದ ಭಾರತದ ಮೀನುಗಾರರು ಅಲ್ಲಿ ವರೆಗೂ ತೆರಳದಂತೆ ಮೀನುಗಾರಿಕಾ ಇಲಾಖೆ ಸೂಚನೆ ನೀಡಿದೆ.
High Alert in Karwar, Fishermen Barred from Going Beyond 12 Nautical Miles; Foreign Vessels with Chinese or Pakistani Crew Restricted.
04-07-26 02:51 pm
HK News Staffer
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
04-07-26 08:09 pm
HK News Staffer
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
03-07-26 10:17 pm
HK News Staffer
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
04-07-26 09:47 pm
HK News Staffer
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm
ಅಶ್ಲೀಲ ವಿಡಿಯೋ ಇದೆಯೆಂದು ಹೇಳಿ ರಿಯಲ್ ಎಸ್ಟೇಟ್ ಉದ್...
04-07-26 06:54 pm
'ಡಿಜಿಟಲ್ ಅರೆಸ್ಟ್’ ಸೈಬರ್ ವಂಚಕರಿಗೆ ಅಮಾಯಕರ ಹೆಸರಲ...
04-07-26 05:58 pm
ಮಲ್ಪೆ ವಾಟರ್ ಸ್ಪೋರ್ಟ್ಸ್ ಉದ್ಯಮಿ ಸಂದೀಪ್ ಸಾಲ್ಯಾನ್...
04-07-26 03:12 pm