ಬ್ರೇಕಿಂಗ್ ನ್ಯೂಸ್
08-05-25 12:23 pm HK News Desk ಕರ್ನಾಟಕ
ಕಾರವಾರ, ಮೇ 7 : ಪಾಕಿಸ್ತಾನ ಮೇಲೆ ಸರ್ಜಿಕಲ್ ದಾಳಿ ನಡೆಸಿದ ಬೆನ್ನಲ್ಲೇ ರಾಜ್ಯದ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಭಾರತದ ಅತಿದೊಡ್ಡ ನೌಕಾನೆಲೆ ಎನಿಸಿರುವ ಕಾರವಾರದ ಕದಂಬ ನೌಕಾನೆಲೆ ಮತ್ತು ಕಾರವಾರ ಬಂದರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಕಾರವಾರದ ಅರಗಾದಲ್ಲಿರುವ ಕದಂಬ ನೌಕಾ ನೆಲೆಯಲ್ಲಿ ಕರಾವಳಿ ಕಾವಲುಪಡೆ, ಭಾರತೀಯ ತಟರಕ್ಷಕ ದಳದಿಂದ ತಪಾಸಣೆ ಹೆಚ್ಚಿಸಲಾಗಿದೆ. ಇದೇ ವೇಳೆ, ಅನ್ಯ ದೇಶದಿಂದ ಬರುವ ಸರಕು ಸಾಗಾಟ ಹಡಗಿನಲ್ಲಿ ಚೀನಾ, ಪಾಕಿಸ್ತಾನ ಸಿಬ್ಬಂದಿಗಳಿದ್ದರೆ ಅಂತಹ ಹಡಗುಗಳಿಗೆ ಬಂದರಿನಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ.
ಯಾವುದೇ ದೇಶದ ಹಡಗಿನಲ್ಲಿ ಪಾಕಿಸ್ತಾನ, ಚೀನಾ ಸಿಬ್ಬಂದಿ ಇದ್ದರೆ ಅಂತಹ ಹಡಗುಗಳಿಗೆ ಕಾರವಾರ ಬಂದರಿನಲ್ಲಿ ನಿಲುಗಡೆಗೆ ನಿಷೇಧ ವಿಧಿಸಲಾಗಿದೆ. ಮೀನುಗಾರಿಕಾ ಬಂದರಿಗೆ ಬರುವ ಬೋಟ್, ಹಡಗುಗಳಲ್ಲಿ ಪೊಲೀಸರು ತೀವ್ರ ತಪಾಸಣೆ ಕೈಗೊಂಡಿದ್ದಾರೆ. ಎಲ್ಲ ಮಾದರಿಯ ಮೀನುಗಾರಿಕಾ ಬೋಟ್ ಗಳನ್ನೂ ಅಪರಿಚಿತ ವ್ಯಕ್ತಿಗಳಿದ್ದರೆ ಕರಾವಳಿ ಕಾವಲು ಪಡೆ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.
ಇದಲ್ಲದೆ, ಸಮುದ್ರದಲ್ಲಿ 12 ನಾಟಿಕಲ್ ಮೈಲ್ ದೂರದಿಂದ ಹೊರಕ್ಕೆ ಹೋಗದಂತೆ ಆಳ ಸಮುದ್ರ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ತೀರದಿಂದ 200 ಕಿಮೀ ದೂರದ ನಂತರ ಅಂತಾರಾಷ್ಟ್ರೀಯ ಮಟ್ಟದ ಜಲಸಂಚಾರ ಇರಲಿದ್ದು ಅಲ್ಲಿ ಪಾಕಿಸ್ತಾನ ಸೇರಿದಂತೆ ಯಾವುದೇ ದೇಶದ ಹಡಗು, ಬೋಟ್ಗಳು ಸಂಚರಿಸಬಹುದು. ಪಾಕಿಗಳ ಕೈಗೆ ಸಿಕ್ಕಿಬಿದ್ದು ಒದ್ದಾಡುವ ಬದಲು ಅಲ್ಲಿ ವರೆಗೆ ಹೋಗುವುದನ್ನು ತಪ್ಪಿಸಿ ಎಂದು ಮೀನುಗಾರರಿಗೆ ಸೂಚನೆ ನೀಡಲಾಗಿದೆ.
ಸಾಮಾನ್ಯವಾಗಿ ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳಿದವರು 150- 200 ಕಿಮೀ ಗಡಿರೇಖೆಯ ವರೆಗೂ ಸಂಚಾರ ಮಾಡುತ್ತಾರೆ. ಸದ್ಯಕ್ಕೆ ಪಾಕಿಸ್ತಾನದ ಜೊತೆಗೆ ಸಂಘರ್ಷ ವಾತಾವರಣ ಇರುವುದರಿಂದ ಭಾರತದ ಮೀನುಗಾರರು ಅಲ್ಲಿ ವರೆಗೂ ತೆರಳದಂತೆ ಮೀನುಗಾರಿಕಾ ಇಲಾಖೆ ಸೂಚನೆ ನೀಡಿದೆ.
High Alert in Karwar, Fishermen Barred from Going Beyond 12 Nautical Miles; Foreign Vessels with Chinese or Pakistani Crew Restricted.
08-09-25 02:41 pm
Bangalore Correspondent
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
08-09-25 02:02 pm
HK News Desk
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm