ಬ್ರೇಕಿಂಗ್ ನ್ಯೂಸ್
08-05-25 12:23 pm HK News Desk ಕರ್ನಾಟಕ
ಕಾರವಾರ, ಮೇ 7 : ಪಾಕಿಸ್ತಾನ ಮೇಲೆ ಸರ್ಜಿಕಲ್ ದಾಳಿ ನಡೆಸಿದ ಬೆನ್ನಲ್ಲೇ ರಾಜ್ಯದ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಭಾರತದ ಅತಿದೊಡ್ಡ ನೌಕಾನೆಲೆ ಎನಿಸಿರುವ ಕಾರವಾರದ ಕದಂಬ ನೌಕಾನೆಲೆ ಮತ್ತು ಕಾರವಾರ ಬಂದರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಕಾರವಾರದ ಅರಗಾದಲ್ಲಿರುವ ಕದಂಬ ನೌಕಾ ನೆಲೆಯಲ್ಲಿ ಕರಾವಳಿ ಕಾವಲುಪಡೆ, ಭಾರತೀಯ ತಟರಕ್ಷಕ ದಳದಿಂದ ತಪಾಸಣೆ ಹೆಚ್ಚಿಸಲಾಗಿದೆ. ಇದೇ ವೇಳೆ, ಅನ್ಯ ದೇಶದಿಂದ ಬರುವ ಸರಕು ಸಾಗಾಟ ಹಡಗಿನಲ್ಲಿ ಚೀನಾ, ಪಾಕಿಸ್ತಾನ ಸಿಬ್ಬಂದಿಗಳಿದ್ದರೆ ಅಂತಹ ಹಡಗುಗಳಿಗೆ ಬಂದರಿನಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ.
ಯಾವುದೇ ದೇಶದ ಹಡಗಿನಲ್ಲಿ ಪಾಕಿಸ್ತಾನ, ಚೀನಾ ಸಿಬ್ಬಂದಿ ಇದ್ದರೆ ಅಂತಹ ಹಡಗುಗಳಿಗೆ ಕಾರವಾರ ಬಂದರಿನಲ್ಲಿ ನಿಲುಗಡೆಗೆ ನಿಷೇಧ ವಿಧಿಸಲಾಗಿದೆ. ಮೀನುಗಾರಿಕಾ ಬಂದರಿಗೆ ಬರುವ ಬೋಟ್, ಹಡಗುಗಳಲ್ಲಿ ಪೊಲೀಸರು ತೀವ್ರ ತಪಾಸಣೆ ಕೈಗೊಂಡಿದ್ದಾರೆ. ಎಲ್ಲ ಮಾದರಿಯ ಮೀನುಗಾರಿಕಾ ಬೋಟ್ ಗಳನ್ನೂ ಅಪರಿಚಿತ ವ್ಯಕ್ತಿಗಳಿದ್ದರೆ ಕರಾವಳಿ ಕಾವಲು ಪಡೆ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.
ಇದಲ್ಲದೆ, ಸಮುದ್ರದಲ್ಲಿ 12 ನಾಟಿಕಲ್ ಮೈಲ್ ದೂರದಿಂದ ಹೊರಕ್ಕೆ ಹೋಗದಂತೆ ಆಳ ಸಮುದ್ರ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ತೀರದಿಂದ 200 ಕಿಮೀ ದೂರದ ನಂತರ ಅಂತಾರಾಷ್ಟ್ರೀಯ ಮಟ್ಟದ ಜಲಸಂಚಾರ ಇರಲಿದ್ದು ಅಲ್ಲಿ ಪಾಕಿಸ್ತಾನ ಸೇರಿದಂತೆ ಯಾವುದೇ ದೇಶದ ಹಡಗು, ಬೋಟ್ಗಳು ಸಂಚರಿಸಬಹುದು. ಪಾಕಿಗಳ ಕೈಗೆ ಸಿಕ್ಕಿಬಿದ್ದು ಒದ್ದಾಡುವ ಬದಲು ಅಲ್ಲಿ ವರೆಗೆ ಹೋಗುವುದನ್ನು ತಪ್ಪಿಸಿ ಎಂದು ಮೀನುಗಾರರಿಗೆ ಸೂಚನೆ ನೀಡಲಾಗಿದೆ.
ಸಾಮಾನ್ಯವಾಗಿ ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳಿದವರು 150- 200 ಕಿಮೀ ಗಡಿರೇಖೆಯ ವರೆಗೂ ಸಂಚಾರ ಮಾಡುತ್ತಾರೆ. ಸದ್ಯಕ್ಕೆ ಪಾಕಿಸ್ತಾನದ ಜೊತೆಗೆ ಸಂಘರ್ಷ ವಾತಾವರಣ ಇರುವುದರಿಂದ ಭಾರತದ ಮೀನುಗಾರರು ಅಲ್ಲಿ ವರೆಗೂ ತೆರಳದಂತೆ ಮೀನುಗಾರಿಕಾ ಇಲಾಖೆ ಸೂಚನೆ ನೀಡಿದೆ.
High Alert in Karwar, Fishermen Barred from Going Beyond 12 Nautical Miles; Foreign Vessels with Chinese or Pakistani Crew Restricted.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm