ಬ್ರೇಕಿಂಗ್ ನ್ಯೂಸ್
08-05-25 07:50 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 09 : ಅಶ್ರಫ್ ಹಾಗೂ ಸುಹಾಸ್ ಶೆಟ್ಟಿ ಹತ್ಯೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಈ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ವಿಧಾನ ಸೌಧದಲ್ಲಿ ಗುರುವಾರ ನಡೆದ ಸಭೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಪಹಲ್ಗಾಮ್ ದಾಳಿಯ ಸಂದರ್ಭದಲ್ಲಿ ಮಂಗಳೂರಿನಲ್ಲಿ ಕೇರಳ ಮೂಲದ ಅಶ್ರಫ್ ಎಂಬ ವ್ಯಕ್ತಿಯನ್ನು ಗುಂಪು ಹಲ್ಲೆಯ ಮೂಲಕ ಕೊಲೆ ಮಾಡಲಾಗಿತ್ತು. ಪರಿಣಾಮವಾಗಿ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ. ಸುಹಾಸ್ ಶೆಟ್ಟಿ ಕೊಲೆಯ ಬೆನ್ನಲ್ಲೇ ಅಲ್ಲಲ್ಲಿ ಅಹಿತಕರ ಘಟನೆಗಳು ನಡೆದಿವೆ. ಐವರ ಮೇಲೆ ತಲವಾರು, ಚೂರಿಯಿಂದ ದಾಳಿ ಮಾಡಲಾಗಿದೆ.
ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಲಾಗಿತ್ತು. ಈಗಲೇ ರಾತ್ರಿ ಹೊತ್ತು ಅಂಗಡಿ- ಮುಗ್ಗಟ್ಟುಗಳನ್ನು ಬೇಗ ಬಂದ್ ಮಾಡಿಸಲಾಗುತ್ತಿದೆ. ಈ ನಡುವೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಸ್ಪೀಕರ್ ಯು.ಟಿ ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಯಿತು.
ಜಿಲ್ಲಾಧಿಕಾರಿ ಸೇರಿದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯನ್ನು ನಡೆಸಿದರು. ಜಿಲ್ಲೆಯಲ್ಲಿ ಇತ್ತಿಚೆಗೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಚರಣೆ ಬಗ್ಗೆ ಚರ್ಚೆ ನಡೆಸಿದ ಸಚಿವರು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕಾಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಯಾವುದೇ ಒತ್ತಡಕ್ಕೆ ಮಣಿಯಬೇಡಿ ;
ಮಂಗಳೂರಿಲ್ಲಿ ಪೊಲೀಸ್ ಇಲಾಖೆ ಯಾವುದೇ ಒತ್ತಡಕ್ಕೆ ಮಣಿಯುವ ಅವಶ್ಯಕತೆ ಇಲ್ಲ. ಸರ್ಕಾರ ನಿಮ್ಮ ಜೊತೆ ಇದೆ. ಕಾನೂನು ಬಾಹಿರ ಚಟುವಟಿಕೆ ನಡೆಸುವವರು ಹಾಗೂ ಅದಕ್ಕೆ ಉತ್ತೇಜನ ನೀಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೇ 16ರಕ್ಕೆ ನೂತನ ಜಿಲ್ಲಾಧಿಕಾರಿಗಳ ಕಟ್ಟಡ ಉದ್ಘಾಟನೆ ;
ಮಂಗಳೂರಿನಲ್ಲಿ ನೂತನ ಜಿಲ್ಲಾಧಿಕಾರಿಗಳ ಕಟ್ಟಡ ಉದ್ಘಾಟನೆ ಕುರಿತಂತೆ ಇದೇ ವೇಳೆ ಚರ್ಚೆ ನಡೆಸಲಾಯಿತು. ಇದೇ ತಿಂಗಳ 16 ರಂದು ನೂತನ ಜಿಲ್ಲಾಧಿಕಾರಿ ಕಚೇರಿಯನ್ನ ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಅಗತ್ಯ ತಯಾರಿಗಳನ್ನ ನಡೆಸುವಂತೆ ಜಿಲ್ಲಾಡಳಿತಕ್ಕೆ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು. ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮಂಗಳೂರು ಪೊಲೀಸ್ ಕಮಿಷನರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಾಗವಹಿಸಿದ್ದರು.
Suhas Shetty Murder, U.T. Khader and Minister Dinesh Gundu Rao Give Free Hand for Action, also the inauguration of the new dc office at padil will be inaugurated on 16th of May by CM Siddaramaiah they added.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm