ಬ್ರೇಕಿಂಗ್ ನ್ಯೂಸ್
08-05-25 07:50 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 09 : ಅಶ್ರಫ್ ಹಾಗೂ ಸುಹಾಸ್ ಶೆಟ್ಟಿ ಹತ್ಯೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಈ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ವಿಧಾನ ಸೌಧದಲ್ಲಿ ಗುರುವಾರ ನಡೆದ ಸಭೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಪಹಲ್ಗಾಮ್ ದಾಳಿಯ ಸಂದರ್ಭದಲ್ಲಿ ಮಂಗಳೂರಿನಲ್ಲಿ ಕೇರಳ ಮೂಲದ ಅಶ್ರಫ್ ಎಂಬ ವ್ಯಕ್ತಿಯನ್ನು ಗುಂಪು ಹಲ್ಲೆಯ ಮೂಲಕ ಕೊಲೆ ಮಾಡಲಾಗಿತ್ತು. ಪರಿಣಾಮವಾಗಿ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ. ಸುಹಾಸ್ ಶೆಟ್ಟಿ ಕೊಲೆಯ ಬೆನ್ನಲ್ಲೇ ಅಲ್ಲಲ್ಲಿ ಅಹಿತಕರ ಘಟನೆಗಳು ನಡೆದಿವೆ. ಐವರ ಮೇಲೆ ತಲವಾರು, ಚೂರಿಯಿಂದ ದಾಳಿ ಮಾಡಲಾಗಿದೆ.
ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಲಾಗಿತ್ತು. ಈಗಲೇ ರಾತ್ರಿ ಹೊತ್ತು ಅಂಗಡಿ- ಮುಗ್ಗಟ್ಟುಗಳನ್ನು ಬೇಗ ಬಂದ್ ಮಾಡಿಸಲಾಗುತ್ತಿದೆ. ಈ ನಡುವೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಸ್ಪೀಕರ್ ಯು.ಟಿ ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಯಿತು.
ಜಿಲ್ಲಾಧಿಕಾರಿ ಸೇರಿದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯನ್ನು ನಡೆಸಿದರು. ಜಿಲ್ಲೆಯಲ್ಲಿ ಇತ್ತಿಚೆಗೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಚರಣೆ ಬಗ್ಗೆ ಚರ್ಚೆ ನಡೆಸಿದ ಸಚಿವರು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕಾಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಯಾವುದೇ ಒತ್ತಡಕ್ಕೆ ಮಣಿಯಬೇಡಿ ;
ಮಂಗಳೂರಿಲ್ಲಿ ಪೊಲೀಸ್ ಇಲಾಖೆ ಯಾವುದೇ ಒತ್ತಡಕ್ಕೆ ಮಣಿಯುವ ಅವಶ್ಯಕತೆ ಇಲ್ಲ. ಸರ್ಕಾರ ನಿಮ್ಮ ಜೊತೆ ಇದೆ. ಕಾನೂನು ಬಾಹಿರ ಚಟುವಟಿಕೆ ನಡೆಸುವವರು ಹಾಗೂ ಅದಕ್ಕೆ ಉತ್ತೇಜನ ನೀಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೇ 16ರಕ್ಕೆ ನೂತನ ಜಿಲ್ಲಾಧಿಕಾರಿಗಳ ಕಟ್ಟಡ ಉದ್ಘಾಟನೆ ;
ಮಂಗಳೂರಿನಲ್ಲಿ ನೂತನ ಜಿಲ್ಲಾಧಿಕಾರಿಗಳ ಕಟ್ಟಡ ಉದ್ಘಾಟನೆ ಕುರಿತಂತೆ ಇದೇ ವೇಳೆ ಚರ್ಚೆ ನಡೆಸಲಾಯಿತು. ಇದೇ ತಿಂಗಳ 16 ರಂದು ನೂತನ ಜಿಲ್ಲಾಧಿಕಾರಿ ಕಚೇರಿಯನ್ನ ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಅಗತ್ಯ ತಯಾರಿಗಳನ್ನ ನಡೆಸುವಂತೆ ಜಿಲ್ಲಾಡಳಿತಕ್ಕೆ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು. ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮಂಗಳೂರು ಪೊಲೀಸ್ ಕಮಿಷನರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಾಗವಹಿಸಿದ್ದರು.
Suhas Shetty Murder, U.T. Khader and Minister Dinesh Gundu Rao Give Free Hand for Action, also the inauguration of the new dc office at padil will be inaugurated on 16th of May by CM Siddaramaiah they added.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm