ಬ್ರೇಕಿಂಗ್ ನ್ಯೂಸ್
10-05-25 11:30 am HK News Desk ಕರ್ನಾಟಕ
ಮಂಡ್ಯ, ಮೇ 10 : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಯುವಕನ್ನು ತಾಲ್ಲೂಕಿನ ಕಿರುಗಾವಲು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಿರುಗಾವಲು ಗ್ರಾಮದ ಜಾವೀದ್ ಪಾಷ (33) ಬಂಧಿತ ಆರೋಪಿ
ಆರೋಪಿಯು ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ಗೆ ಮೋದಿ ಶೂ ಧರಿಸುವಂತೆ ಎಡಿಟ್ ಮಾಡಿದ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ಆರೋಪಿ ವಿಕೃತಿ ಮೆರೆದಿದ್ದ. ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಮಾತನಾಡಿ ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದು, ಬಿಜೆಪಿ ಕಾರ್ಯಕರ್ತರ ದೂರಿನ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಮೇ 8ರಂದು ಎಐ ತಂತ್ರಜ್ಞಾನ ಬಳಕೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನಕಾರಿಯಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ ಎಂದು ಆರೋಪಿಸಿ ಬಿಜೆಪಿ ಹಾಗೂ ಹಿಂದುತ್ವ ಪರ ಕಾರ್ಯಕರ್ತರು ಕಿರುಗಾವಲು ಪೊಲೀಸರ ಗಮನಕ್ಕೆ ತಂದಿದ್ದರು.
ಪ್ರಧಾನಿ ನರೇಂದ್ರಮೋದಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾದ ಪೋಸ್ಟ್ ಹಂಚಿಕೊಂಡಿರುವ ಜಾವೀದ್ ಪಾಷ ವಿರುದ್ಧ ದೇಶದ್ರೋಹದಡಿ ಪ್ರಕರಣ ದಾಖಲಿಸಿಕೊಂಡು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದುತ್ವ ಪರ ಕಾರ್ಯಕರ್ತರು ಕಿರುಗಾವಲು ಪೊಲೀಸ್ ಠಾಣೆ ಮುಂದೆ ನೂರಾರು ಮಂದಿ ಜಮಾಯಿಸಿ ಆರೋಪಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಬಗ್ಗೆ ಮಂಡ್ಯ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಮೋಹನ್ ಮಾತನಾಡಿ, ‘ಕಾಶ್ಮೀರದಲ್ಲಿ 26 ಮಂದಿ ಬಲಿ ಪಡೆದ ಪಾಕಿಸ್ತಾನ ಉಗ್ರರ ವಿರುದ್ಧ ಸಮರ ಸಾರಿರುವ ಸಂದರ್ಭದಲ್ಲಿ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಮುಂದಾಗಿರುವ ಇಂಥ ವ್ಯಕ್ತಿಯ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು
Kirugavalu Police have arrested a man for his post on a social media platform allegedly defaming Prime Minister Narendra Modi in Malavalli taluk of Mandya district, on Friday.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am