ಬ್ರೇಕಿಂಗ್ ನ್ಯೂಸ್
13-05-25 01:14 pm HK News Desk ಕರ್ನಾಟಕ
ವಿಜಯಪುರ, ಮೇ 13 : ಕದನ ಘೋಷಣೆ ಮಾಡಿದಾಗ ನಮ್ಮ ಸಂಪೂರ್ಣ ಬೆಂಬಲ ಕೊಟ್ಟಿದ್ದೆವು. ಪಾಕಿಸ್ತಾನ ಇನ್ನೊಮ್ಮೆ ಇಂತಹ ದುಸ್ಸಾಹಸಕ್ಕೆ ಕೈ ಹಾಕಬಾರದು, ಹಾಗೆ ಪಾಠ ಕಲಿಸಬೇಕು ಎಂದು ಬೆಂಬಲಿಸಿದ್ದೇವು. ಯಾವ ಉದ್ದೇಶ ಗುರಿ ಇಟ್ಟುಕೊಂಡು ಕದನ ಆರಂಭ ಮಾಡಿದ್ದೆವೋ ಆ ಗುರಿ ಈಡೇರಿತಾ ಎನ್ನುವ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ ಎಂದು ಸಚಿವ ಕೃಷ್ಣ ಭೈರೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಪಾಕ್ ಜೊತೆಗೆ ಕದನ ವಿರಾಮ ವಿಚಾರದಲ್ಲಿ ವಿಜಯಪುರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪಾಕಿಸ್ತಾನಕ್ಕೆ ಪಾಠ ಕಲಿಸಬೇಕು ಅಂದುಕೊಂಡಿದ್ದೆವೋ ಆ ಪಾಠ ಈಡೇರಿತಾ ಎಂಬ ಪ್ರಶ್ನೆ ಇದೆ. ಮೂರ್ನಾಲ್ಕು ದಿನ ಪ್ರಯತ್ನ ಮಾಡಿ ಅಲ್ಲಿಗೆ ಬಿಟ್ಟರೆ ಪಾಕಿಸ್ತಾನಕ್ಕೆ ಇನ್ನಷ್ಟು ಇಂಬು ಕೊಟ್ಟಂತಾಗುತ್ತದೆ ಎಂಬುದು ಅನುಮಾನ ಹುಟ್ಟಲು ಶುರುವಾಗುತ್ತೆ. ಸ್ಪಷ್ಟವಾದ ಉತ್ತರ ಇಲ್ಲದ ಪ್ರಶ್ನೆ ಎಂದರೆ ನಾವು ಕದನ ಮಾಡುವುದು ಸರಿ. ಅರ್ಧಕ್ಕೆ ನಿಲ್ಲಿಸುವುದು ಏಕೆನ್ನುವುದಕ್ಕೆ ಉತ್ತರ ಇಲ್ಲ.
ನಮ್ಮ ಆಂತರಿಕ ವಿಚಾರದಲ್ಲಿ ಅಮೆರಿಕ ಅಧ್ಯಕ್ಷ ಬೆರಳು ತೋರಿಸುತ್ತಾರೆ. ಅಮೇರಿಕಾದವರು ಹೇಳಿದು ಅಂತೇಳಿ ಯುದ್ದ ನಿಲ್ಲಿಸುವುದಾ..? ಅಮೇರಿಕಾ ನಮ್ಮ ಆಂತರಿಕ ವಿಚಾರ ತೀರ್ಮಾನ ಮಾಡುವುದಾದರೆ ನಮ್ಮ ಸಾರ್ವಭೌಮತ್ವದ ವಿಷಯ ಏನು..?
ಕಾಶ್ಮೀರದ ವಿಚಾರದಲ್ಲಿ ಅಮೇರಿಕಾದವರು ಮದ್ಯಸ್ಥಿಕೆ ವಹಿಸುತ್ತೇವೆ ಅಂತಾರೆ. ಇದಕ್ಕಿಂತ ಭಾರತಕ್ಕೆ ದೊಡ್ಡ ಹಿನ್ನಡೆಯಿಲ್ಲ. ಇದು ಆಂತರಿಕ ವಿಚಾರ, ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಬೇರೆ ದೇಶದವರು ಬಂದು ನಮ್ಮ ಆಂತರಿಕ ವಿಚಾರದಲ್ಲಿ ನ್ಯಾಯ ಪಂಚಾಯತಿ ಮಾಡಿದರೆ ಅಲ್ಲಿಗೆ ಕಾಶ್ಮೀರ ಸಮಸ್ಯೆ ಮುಗಿದು ಹೋಗುತ್ತಾ ಅಥವಾ ಮರಳಿ ಸಮಸ್ಯೆ ಆರಂಭ ಆಗುತ್ತಾ....? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಇಲ್ಲದಂತೆ ಆಗಿದೆ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಸ್ಪಷ್ಟ ಉತ್ತರ ಕೊಡಬೇಕು ಎಂದು ಸಚಿವ ಕೃಷ್ಣಭೈರೇಗೌಡ ಆಗ್ರಹಿಸಿದ್ದಾರೆ.
After going to war, there should have been a logical end. Instead, how about stopping the conflict as soon as America says so? Minister Krishna Byre Gowda has questioned the central government whether all our objectives have been fulfilled due to this ceasefire.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm