ಬ್ರೇಕಿಂಗ್ ನ್ಯೂಸ್
13-05-25 01:14 pm HK News Desk ಕರ್ನಾಟಕ
ವಿಜಯಪುರ, ಮೇ 13 : ಕದನ ಘೋಷಣೆ ಮಾಡಿದಾಗ ನಮ್ಮ ಸಂಪೂರ್ಣ ಬೆಂಬಲ ಕೊಟ್ಟಿದ್ದೆವು. ಪಾಕಿಸ್ತಾನ ಇನ್ನೊಮ್ಮೆ ಇಂತಹ ದುಸ್ಸಾಹಸಕ್ಕೆ ಕೈ ಹಾಕಬಾರದು, ಹಾಗೆ ಪಾಠ ಕಲಿಸಬೇಕು ಎಂದು ಬೆಂಬಲಿಸಿದ್ದೇವು. ಯಾವ ಉದ್ದೇಶ ಗುರಿ ಇಟ್ಟುಕೊಂಡು ಕದನ ಆರಂಭ ಮಾಡಿದ್ದೆವೋ ಆ ಗುರಿ ಈಡೇರಿತಾ ಎನ್ನುವ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ ಎಂದು ಸಚಿವ ಕೃಷ್ಣ ಭೈರೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಪಾಕ್ ಜೊತೆಗೆ ಕದನ ವಿರಾಮ ವಿಚಾರದಲ್ಲಿ ವಿಜಯಪುರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪಾಕಿಸ್ತಾನಕ್ಕೆ ಪಾಠ ಕಲಿಸಬೇಕು ಅಂದುಕೊಂಡಿದ್ದೆವೋ ಆ ಪಾಠ ಈಡೇರಿತಾ ಎಂಬ ಪ್ರಶ್ನೆ ಇದೆ. ಮೂರ್ನಾಲ್ಕು ದಿನ ಪ್ರಯತ್ನ ಮಾಡಿ ಅಲ್ಲಿಗೆ ಬಿಟ್ಟರೆ ಪಾಕಿಸ್ತಾನಕ್ಕೆ ಇನ್ನಷ್ಟು ಇಂಬು ಕೊಟ್ಟಂತಾಗುತ್ತದೆ ಎಂಬುದು ಅನುಮಾನ ಹುಟ್ಟಲು ಶುರುವಾಗುತ್ತೆ. ಸ್ಪಷ್ಟವಾದ ಉತ್ತರ ಇಲ್ಲದ ಪ್ರಶ್ನೆ ಎಂದರೆ ನಾವು ಕದನ ಮಾಡುವುದು ಸರಿ. ಅರ್ಧಕ್ಕೆ ನಿಲ್ಲಿಸುವುದು ಏಕೆನ್ನುವುದಕ್ಕೆ ಉತ್ತರ ಇಲ್ಲ.
ನಮ್ಮ ಆಂತರಿಕ ವಿಚಾರದಲ್ಲಿ ಅಮೆರಿಕ ಅಧ್ಯಕ್ಷ ಬೆರಳು ತೋರಿಸುತ್ತಾರೆ. ಅಮೇರಿಕಾದವರು ಹೇಳಿದು ಅಂತೇಳಿ ಯುದ್ದ ನಿಲ್ಲಿಸುವುದಾ..? ಅಮೇರಿಕಾ ನಮ್ಮ ಆಂತರಿಕ ವಿಚಾರ ತೀರ್ಮಾನ ಮಾಡುವುದಾದರೆ ನಮ್ಮ ಸಾರ್ವಭೌಮತ್ವದ ವಿಷಯ ಏನು..?
ಕಾಶ್ಮೀರದ ವಿಚಾರದಲ್ಲಿ ಅಮೇರಿಕಾದವರು ಮದ್ಯಸ್ಥಿಕೆ ವಹಿಸುತ್ತೇವೆ ಅಂತಾರೆ. ಇದಕ್ಕಿಂತ ಭಾರತಕ್ಕೆ ದೊಡ್ಡ ಹಿನ್ನಡೆಯಿಲ್ಲ. ಇದು ಆಂತರಿಕ ವಿಚಾರ, ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಬೇರೆ ದೇಶದವರು ಬಂದು ನಮ್ಮ ಆಂತರಿಕ ವಿಚಾರದಲ್ಲಿ ನ್ಯಾಯ ಪಂಚಾಯತಿ ಮಾಡಿದರೆ ಅಲ್ಲಿಗೆ ಕಾಶ್ಮೀರ ಸಮಸ್ಯೆ ಮುಗಿದು ಹೋಗುತ್ತಾ ಅಥವಾ ಮರಳಿ ಸಮಸ್ಯೆ ಆರಂಭ ಆಗುತ್ತಾ....? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಇಲ್ಲದಂತೆ ಆಗಿದೆ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಸ್ಪಷ್ಟ ಉತ್ತರ ಕೊಡಬೇಕು ಎಂದು ಸಚಿವ ಕೃಷ್ಣಭೈರೇಗೌಡ ಆಗ್ರಹಿಸಿದ್ದಾರೆ.
After going to war, there should have been a logical end. Instead, how about stopping the conflict as soon as America says so? Minister Krishna Byre Gowda has questioned the central government whether all our objectives have been fulfilled due to this ceasefire.
02-06-25 10:43 pm
Bangalore Correspondent
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
02-06-25 10:59 pm
Mangalore Correspondent
ಜೇನುಗೂಡಿಗೆ ಕಲ್ಲು ಹೊಡೆಯಬೇಡಿ, ಸರಕಾರವೇ ಸಮಾಜದ ಸ್ವ...
02-06-25 10:54 pm
ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದ...
02-06-25 10:49 pm
ಹಿಂದುತ್ವ ಹೋರಾಟಕ್ಕೆ ಖಾಕಿ ಬಿಸಿ! ಮಹೇಶ್ ಶೆಟ್ಟಿ ತಿ...
02-06-25 09:08 pm
Mangalore, Dr Kalladka Prabhakar Bhat, FIR: ಸ...
02-06-25 12:51 pm
02-06-25 04:01 pm
Mangalore Correspondent
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm