ಬ್ರೇಕಿಂಗ್ ನ್ಯೂಸ್
13-05-25 09:37 pm HK News Desk ಕರ್ನಾಟಕ
ದಾವಣಗೆರೆ, ಮೇ 13 : ಕರ್ತವ್ಯ ನಿಮಿತ್ತ ಲಾರಿ ನಿಲ್ಲಿಸಲು ಯತ್ನಿಸಿದ ಪೊಲೀಸ್ ಸಿಬ್ಬಂದಿ ಮೇಲೆ ಚಾಲಕ ಲಾರಿ ಹತ್ತಿಸಿದ ಪರಿಣಾಮ ಪೊಲೀಸ್ ಕಾನ್ಸ್ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಹೆಬ್ಬಾಳ ಟೋಲ್ ಗೇಟ್ ಬಳಿ ನಡೆದಿದೆ.
ಡಿಎಆರ್ ಕಾನ್ಸ್ಟೇಬಲ್ ರಾಮಪ್ಪ ಪೂಜಾರ್ ಸಾವನ್ನಪ್ಪಿದ ಸಿಬ್ಬಂದಿ. ಹೆಬ್ಬಾಳ ಟೋಲ್ ಗೇಟ್ ಬಳಿ ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ರಾಮಪ್ಪ ಪೂಜಾರ್ ಸಂಚಾರಿ ಪೊಲೀಸರೊಂದಿಗೆ ಲಾರಿ ನಿಲ್ಲಿಸಲು ಯತ್ನಿಸಿದ್ದಾರೆ. ಈ ವೇಳೆ, ಅತಿ ವೇಗದಲ್ಲಿ ಇದ್ದ ಲಾರಿ ಸಿಬ್ಬಂದಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ, ಚಾಲಕನನ್ನು ಹಿಡಿಯವ ಪ್ರಯತ್ನ ನಡೆಸಲಾಯಿತಾದರೂ ಆತ ಪರಾರಿಯಾಗಿದ್ದ. ಘಟನೆ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಮಾಹಿತಿ ಬೆನ್ನಲ್ಲೇ ಎಸ್ಪಿ ಉಮಾಪ್ರಶಾಂತ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳವಾಗಿರುವ ಟೋಲ್ ಗೇಟ್ ಬಳಿ ಯಾವುದೇ ಸಿಸಿಟಿವಿ ಕ್ಯಾಮರಾ ಅಳವಡಿಸದೇ ಇರುವ ಹಿನ್ನಲೆ ಎಸ್ಪಿ ಅಲ್ಲಿನ ಟೋಲ್ ಆಡಳಿತ ಹಾಗೂ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು.
ಖಾಸಗಿ ಆಸ್ಪತ್ರೆಯ ಶವಾಗಾರದಲ್ಲಿ ಮೃತರ ದೇಹ ಇಡಲಾಗಿದ್ದು, ಸ್ಥಳಕ್ಕೆ ಐಜಿಪಿ ರವಿಕಾಂತೇ ಗೌಡ ಅವರು ಭೇಟಿ ನೀಡಿದರು. ಮೃತ ಪೊಲೀಸ್ ಸಿಬ್ಬಂದಿಯ ಕುಟುಂಬಕ್ಕೆ ಧೈರ್ಯ ನೀಡಿ ಸಾಂತ್ವನ ಹೇಳಿದರು.
ಈ ವೇಳೆ ಮಾತನಾಡಿದ ಎಸ್ಪಿ ಉಮಾಪ್ರಶಾಂತ್, ಘಟನಾ ಸ್ಥಳಕ್ಕೆ ಭೇಟಿ ನೀಡಲಾಗಿದೆ. ಸಿಸಿಟಿವಿ ಕ್ಯಾಮರಾ ಅಳವಡಿಸದೆ ಇರುವುದರಿಂದ ಸಮಸ್ಯೆ ಆಗಿದೆ. ಈ ಕುರಿತು ಪರಿಶೀಲನೆ ನಡೆಸಿ ಮಾಹಿತಿ ಕೊಡುವಂತೆ ಎಚ್ಚರಿಕೆ ನೀಡಲಾಗಿದೆ ಎಂದರು.
ಚಾಲಕನ ಬಂಧನ:
ಅತಿವೇಗ ಮತ್ತು ನಿರ್ಲಕ್ಷ್ಯತನದ ಮೂಲಕ ಲಾರಿ ಚಲಾಯಿಸಿ ಪೊಲೀಸ್ ಸಿಬ್ಬಂದಿ ಸಾವಿಗೆ ಕಾರಣನಾದ ಆರೋಪಿಯನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ.
A police constable was killed on duty after being hit by a speeding truck he was attempting to stop near the Hebbalu toll gate in Davanagere district on Monday. The truck driver reportedly drove straight into the officer and fled the scene.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm