ಬ್ರೇಕಿಂಗ್ ನ್ಯೂಸ್
13-05-25 09:50 pm HK News Desk ಕರ್ನಾಟಕ
ಹಾಸನ, ಮೇ 13 : ಅಪ್ಪನ ಎದುರೇ ಮಗಳನ್ನು ಯುವಕರ ಗುಂಪೊಂದು ಕಿಡ್ನಾಪ್ ಮಾಡಿದ್ದು ಮಗಳನ್ನು ಉಳಿಸಿಕೊಳ್ಳಲು ತಂದೆ ಪರದಾಟ ನಡೆಸಿದ ಘಟನೆ ಬೇಲೂರು ತಾಲ್ಲೂಕಿನ, ಅರೇಹಳ್ಳಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ತಂದೆ, ಮಗಳು ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದಾಗ ಆಕೆಯ ಪ್ರಿಯಕರ ಸೇರಿದಂತೆ ನಾಲ್ವರು ಯುವಕರು ಬಂದು ಕಾರಿನಲ್ಲಿ ಕಿಡ್ನಾಪ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಈ ವೇಳೆ, ಹುಡುಗಿ ತಂದೆ ಕಾರನ್ನು ತಡೆದು ನಿಲ್ಲಿಸಲು ಹೋಗಿ ಡೋರ್ನಲ್ಲಿ ನೇತಾಡುತ್ತಿದ್ದರೂ ಬಿಡದ ದುರುಳರು ರಸ್ತೆಯುದ್ದಕ್ಕೂ ಎಳೆದೊಯ್ದಿದ್ದಾರೆ.
ಅರೇಹಳ್ಳಿ ಪಟ್ಟಣದ ಹೈಸ್ಕೂಲ್ ಮುಂಭಾಗ ತಂದೆ, ಮಗಳು ನಡೆದುಕೊಂಡು ಹೋಗುತ್ತಿದ್ದಾಗ ಅಡ್ಡಹಾಕಿದ ಯುವಕರು ಕೃತ್ಯ ಎಸಗಿದ್ದು 200 ಮೀಟರ್ ದೂರದ ವರೆಗೂ ತಂದೆಯನ್ನು ಎಳೆದೊಯ್ದಿದ್ದಾರೆ. ಕೊನೆಗೆ ಕಾರಿನಿಂದ ನೇತಾಡುತ್ತಲೇ ಬಿದ್ದು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ತಂದೆ ಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
ಮೂಲಗಳ ಪ್ರಕಾರ, ಬೇಲೂರು ತಾಲ್ಲೂಕಿನ ಮಲಸಾವರ ಗ್ರಾಮದ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್ (19) ಕಿಡ್ನಾಪ್ ಆದ ಯುವತಿ ಎನ್ನಲಾಗಿದೆ. ಈಕೆಯನ್ನು ಚನ್ನರಾಯಪಟ್ಟಣ ಮೂಲದ ಪ್ರಜ್ವಲ್ (25) ಎಂಬ ಯುವಕ ಪ್ರೀತಿಸಿ ಎರಡು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದ. ಆದರೆ ಅದ್ಯಾವುದೋ ಗಲಾಟೆಯಲ್ಲಿ ಯುವತಿ ಗಂಡನನ್ನು ಬಿಟ್ಟು ಬಂದಿದ್ದು ಮಂಗಳವಾರ ಸಂಜೆ ತಂದೆ ಜೊತೆ ಅರೇಹಳ್ಳಿಗೆ ಬಂದಿದ್ದಳು. ಈ ವೇಳೆ, ಪ್ರಜ್ವಲ್ ಹಾಗೂ ಆತನ ಸ್ನೇಹಿತರು ಅಡ್ಡಹಾಕಿ ಯುವತಿಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ.
Daughter Abducted in Front of Father, Shocking Incident in Belur at Hassan as Goons Drag Father into Car While He Fights to Save He
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm