ಬ್ರೇಕಿಂಗ್ ನ್ಯೂಸ್
13-05-25 09:50 pm HK News Desk ಕರ್ನಾಟಕ
ಹಾಸನ, ಮೇ 13 : ಅಪ್ಪನ ಎದುರೇ ಮಗಳನ್ನು ಯುವಕರ ಗುಂಪೊಂದು ಕಿಡ್ನಾಪ್ ಮಾಡಿದ್ದು ಮಗಳನ್ನು ಉಳಿಸಿಕೊಳ್ಳಲು ತಂದೆ ಪರದಾಟ ನಡೆಸಿದ ಘಟನೆ ಬೇಲೂರು ತಾಲ್ಲೂಕಿನ, ಅರೇಹಳ್ಳಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ತಂದೆ, ಮಗಳು ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದಾಗ ಆಕೆಯ ಪ್ರಿಯಕರ ಸೇರಿದಂತೆ ನಾಲ್ವರು ಯುವಕರು ಬಂದು ಕಾರಿನಲ್ಲಿ ಕಿಡ್ನಾಪ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಈ ವೇಳೆ, ಹುಡುಗಿ ತಂದೆ ಕಾರನ್ನು ತಡೆದು ನಿಲ್ಲಿಸಲು ಹೋಗಿ ಡೋರ್ನಲ್ಲಿ ನೇತಾಡುತ್ತಿದ್ದರೂ ಬಿಡದ ದುರುಳರು ರಸ್ತೆಯುದ್ದಕ್ಕೂ ಎಳೆದೊಯ್ದಿದ್ದಾರೆ.
ಅರೇಹಳ್ಳಿ ಪಟ್ಟಣದ ಹೈಸ್ಕೂಲ್ ಮುಂಭಾಗ ತಂದೆ, ಮಗಳು ನಡೆದುಕೊಂಡು ಹೋಗುತ್ತಿದ್ದಾಗ ಅಡ್ಡಹಾಕಿದ ಯುವಕರು ಕೃತ್ಯ ಎಸಗಿದ್ದು 200 ಮೀಟರ್ ದೂರದ ವರೆಗೂ ತಂದೆಯನ್ನು ಎಳೆದೊಯ್ದಿದ್ದಾರೆ. ಕೊನೆಗೆ ಕಾರಿನಿಂದ ನೇತಾಡುತ್ತಲೇ ಬಿದ್ದು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ತಂದೆ ಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
ಮೂಲಗಳ ಪ್ರಕಾರ, ಬೇಲೂರು ತಾಲ್ಲೂಕಿನ ಮಲಸಾವರ ಗ್ರಾಮದ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್ (19) ಕಿಡ್ನಾಪ್ ಆದ ಯುವತಿ ಎನ್ನಲಾಗಿದೆ. ಈಕೆಯನ್ನು ಚನ್ನರಾಯಪಟ್ಟಣ ಮೂಲದ ಪ್ರಜ್ವಲ್ (25) ಎಂಬ ಯುವಕ ಪ್ರೀತಿಸಿ ಎರಡು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದ. ಆದರೆ ಅದ್ಯಾವುದೋ ಗಲಾಟೆಯಲ್ಲಿ ಯುವತಿ ಗಂಡನನ್ನು ಬಿಟ್ಟು ಬಂದಿದ್ದು ಮಂಗಳವಾರ ಸಂಜೆ ತಂದೆ ಜೊತೆ ಅರೇಹಳ್ಳಿಗೆ ಬಂದಿದ್ದಳು. ಈ ವೇಳೆ, ಪ್ರಜ್ವಲ್ ಹಾಗೂ ಆತನ ಸ್ನೇಹಿತರು ಅಡ್ಡಹಾಕಿ ಯುವತಿಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ.
Daughter Abducted in Front of Father, Shocking Incident in Belur at Hassan as Goons Drag Father into Car While He Fights to Save He
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm