ಬ್ರೇಕಿಂಗ್ ನ್ಯೂಸ್
13-05-25 09:50 pm HK News Desk ಕರ್ನಾಟಕ
ಹಾಸನ, ಮೇ 13 : ಅಪ್ಪನ ಎದುರೇ ಮಗಳನ್ನು ಯುವಕರ ಗುಂಪೊಂದು ಕಿಡ್ನಾಪ್ ಮಾಡಿದ್ದು ಮಗಳನ್ನು ಉಳಿಸಿಕೊಳ್ಳಲು ತಂದೆ ಪರದಾಟ ನಡೆಸಿದ ಘಟನೆ ಬೇಲೂರು ತಾಲ್ಲೂಕಿನ, ಅರೇಹಳ್ಳಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ತಂದೆ, ಮಗಳು ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದಾಗ ಆಕೆಯ ಪ್ರಿಯಕರ ಸೇರಿದಂತೆ ನಾಲ್ವರು ಯುವಕರು ಬಂದು ಕಾರಿನಲ್ಲಿ ಕಿಡ್ನಾಪ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಈ ವೇಳೆ, ಹುಡುಗಿ ತಂದೆ ಕಾರನ್ನು ತಡೆದು ನಿಲ್ಲಿಸಲು ಹೋಗಿ ಡೋರ್ನಲ್ಲಿ ನೇತಾಡುತ್ತಿದ್ದರೂ ಬಿಡದ ದುರುಳರು ರಸ್ತೆಯುದ್ದಕ್ಕೂ ಎಳೆದೊಯ್ದಿದ್ದಾರೆ.
ಅರೇಹಳ್ಳಿ ಪಟ್ಟಣದ ಹೈಸ್ಕೂಲ್ ಮುಂಭಾಗ ತಂದೆ, ಮಗಳು ನಡೆದುಕೊಂಡು ಹೋಗುತ್ತಿದ್ದಾಗ ಅಡ್ಡಹಾಕಿದ ಯುವಕರು ಕೃತ್ಯ ಎಸಗಿದ್ದು 200 ಮೀಟರ್ ದೂರದ ವರೆಗೂ ತಂದೆಯನ್ನು ಎಳೆದೊಯ್ದಿದ್ದಾರೆ. ಕೊನೆಗೆ ಕಾರಿನಿಂದ ನೇತಾಡುತ್ತಲೇ ಬಿದ್ದು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ತಂದೆ ಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
ಮೂಲಗಳ ಪ್ರಕಾರ, ಬೇಲೂರು ತಾಲ್ಲೂಕಿನ ಮಲಸಾವರ ಗ್ರಾಮದ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್ (19) ಕಿಡ್ನಾಪ್ ಆದ ಯುವತಿ ಎನ್ನಲಾಗಿದೆ. ಈಕೆಯನ್ನು ಚನ್ನರಾಯಪಟ್ಟಣ ಮೂಲದ ಪ್ರಜ್ವಲ್ (25) ಎಂಬ ಯುವಕ ಪ್ರೀತಿಸಿ ಎರಡು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದ. ಆದರೆ ಅದ್ಯಾವುದೋ ಗಲಾಟೆಯಲ್ಲಿ ಯುವತಿ ಗಂಡನನ್ನು ಬಿಟ್ಟು ಬಂದಿದ್ದು ಮಂಗಳವಾರ ಸಂಜೆ ತಂದೆ ಜೊತೆ ಅರೇಹಳ್ಳಿಗೆ ಬಂದಿದ್ದಳು. ಈ ವೇಳೆ, ಪ್ರಜ್ವಲ್ ಹಾಗೂ ಆತನ ಸ್ನೇಹಿತರು ಅಡ್ಡಹಾಕಿ ಯುವತಿಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ.
Daughter Abducted in Front of Father, Shocking Incident in Belur at Hassan as Goons Drag Father into Car While He Fights to Save He
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am