ಬ್ರೇಕಿಂಗ್ ನ್ಯೂಸ್
13-05-25 09:50 pm HK News Desk ಕರ್ನಾಟಕ
ಹಾಸನ, ಮೇ 13 : ಅಪ್ಪನ ಎದುರೇ ಮಗಳನ್ನು ಯುವಕರ ಗುಂಪೊಂದು ಕಿಡ್ನಾಪ್ ಮಾಡಿದ್ದು ಮಗಳನ್ನು ಉಳಿಸಿಕೊಳ್ಳಲು ತಂದೆ ಪರದಾಟ ನಡೆಸಿದ ಘಟನೆ ಬೇಲೂರು ತಾಲ್ಲೂಕಿನ, ಅರೇಹಳ್ಳಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ತಂದೆ, ಮಗಳು ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದಾಗ ಆಕೆಯ ಪ್ರಿಯಕರ ಸೇರಿದಂತೆ ನಾಲ್ವರು ಯುವಕರು ಬಂದು ಕಾರಿನಲ್ಲಿ ಕಿಡ್ನಾಪ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಈ ವೇಳೆ, ಹುಡುಗಿ ತಂದೆ ಕಾರನ್ನು ತಡೆದು ನಿಲ್ಲಿಸಲು ಹೋಗಿ ಡೋರ್ನಲ್ಲಿ ನೇತಾಡುತ್ತಿದ್ದರೂ ಬಿಡದ ದುರುಳರು ರಸ್ತೆಯುದ್ದಕ್ಕೂ ಎಳೆದೊಯ್ದಿದ್ದಾರೆ.
ಅರೇಹಳ್ಳಿ ಪಟ್ಟಣದ ಹೈಸ್ಕೂಲ್ ಮುಂಭಾಗ ತಂದೆ, ಮಗಳು ನಡೆದುಕೊಂಡು ಹೋಗುತ್ತಿದ್ದಾಗ ಅಡ್ಡಹಾಕಿದ ಯುವಕರು ಕೃತ್ಯ ಎಸಗಿದ್ದು 200 ಮೀಟರ್ ದೂರದ ವರೆಗೂ ತಂದೆಯನ್ನು ಎಳೆದೊಯ್ದಿದ್ದಾರೆ. ಕೊನೆಗೆ ಕಾರಿನಿಂದ ನೇತಾಡುತ್ತಲೇ ಬಿದ್ದು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ತಂದೆ ಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
ಮೂಲಗಳ ಪ್ರಕಾರ, ಬೇಲೂರು ತಾಲ್ಲೂಕಿನ ಮಲಸಾವರ ಗ್ರಾಮದ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್ (19) ಕಿಡ್ನಾಪ್ ಆದ ಯುವತಿ ಎನ್ನಲಾಗಿದೆ. ಈಕೆಯನ್ನು ಚನ್ನರಾಯಪಟ್ಟಣ ಮೂಲದ ಪ್ರಜ್ವಲ್ (25) ಎಂಬ ಯುವಕ ಪ್ರೀತಿಸಿ ಎರಡು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದ. ಆದರೆ ಅದ್ಯಾವುದೋ ಗಲಾಟೆಯಲ್ಲಿ ಯುವತಿ ಗಂಡನನ್ನು ಬಿಟ್ಟು ಬಂದಿದ್ದು ಮಂಗಳವಾರ ಸಂಜೆ ತಂದೆ ಜೊತೆ ಅರೇಹಳ್ಳಿಗೆ ಬಂದಿದ್ದಳು. ಈ ವೇಳೆ, ಪ್ರಜ್ವಲ್ ಹಾಗೂ ಆತನ ಸ್ನೇಹಿತರು ಅಡ್ಡಹಾಕಿ ಯುವತಿಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ.
Daughter Abducted in Front of Father, Shocking Incident in Belur at Hassan as Goons Drag Father into Car While He Fights to Save He
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm