ಬ್ರೇಕಿಂಗ್ ನ್ಯೂಸ್
13-05-25 09:50 pm HK News Desk ಕರ್ನಾಟಕ
ಹಾಸನ, ಮೇ 13 : ಅಪ್ಪನ ಎದುರೇ ಮಗಳನ್ನು ಯುವಕರ ಗುಂಪೊಂದು ಕಿಡ್ನಾಪ್ ಮಾಡಿದ್ದು ಮಗಳನ್ನು ಉಳಿಸಿಕೊಳ್ಳಲು ತಂದೆ ಪರದಾಟ ನಡೆಸಿದ ಘಟನೆ ಬೇಲೂರು ತಾಲ್ಲೂಕಿನ, ಅರೇಹಳ್ಳಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ತಂದೆ, ಮಗಳು ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದಾಗ ಆಕೆಯ ಪ್ರಿಯಕರ ಸೇರಿದಂತೆ ನಾಲ್ವರು ಯುವಕರು ಬಂದು ಕಾರಿನಲ್ಲಿ ಕಿಡ್ನಾಪ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಈ ವೇಳೆ, ಹುಡುಗಿ ತಂದೆ ಕಾರನ್ನು ತಡೆದು ನಿಲ್ಲಿಸಲು ಹೋಗಿ ಡೋರ್ನಲ್ಲಿ ನೇತಾಡುತ್ತಿದ್ದರೂ ಬಿಡದ ದುರುಳರು ರಸ್ತೆಯುದ್ದಕ್ಕೂ ಎಳೆದೊಯ್ದಿದ್ದಾರೆ.
ಅರೇಹಳ್ಳಿ ಪಟ್ಟಣದ ಹೈಸ್ಕೂಲ್ ಮುಂಭಾಗ ತಂದೆ, ಮಗಳು ನಡೆದುಕೊಂಡು ಹೋಗುತ್ತಿದ್ದಾಗ ಅಡ್ಡಹಾಕಿದ ಯುವಕರು ಕೃತ್ಯ ಎಸಗಿದ್ದು 200 ಮೀಟರ್ ದೂರದ ವರೆಗೂ ತಂದೆಯನ್ನು ಎಳೆದೊಯ್ದಿದ್ದಾರೆ. ಕೊನೆಗೆ ಕಾರಿನಿಂದ ನೇತಾಡುತ್ತಲೇ ಬಿದ್ದು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ತಂದೆ ಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
ಮೂಲಗಳ ಪ್ರಕಾರ, ಬೇಲೂರು ತಾಲ್ಲೂಕಿನ ಮಲಸಾವರ ಗ್ರಾಮದ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್ (19) ಕಿಡ್ನಾಪ್ ಆದ ಯುವತಿ ಎನ್ನಲಾಗಿದೆ. ಈಕೆಯನ್ನು ಚನ್ನರಾಯಪಟ್ಟಣ ಮೂಲದ ಪ್ರಜ್ವಲ್ (25) ಎಂಬ ಯುವಕ ಪ್ರೀತಿಸಿ ಎರಡು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದ. ಆದರೆ ಅದ್ಯಾವುದೋ ಗಲಾಟೆಯಲ್ಲಿ ಯುವತಿ ಗಂಡನನ್ನು ಬಿಟ್ಟು ಬಂದಿದ್ದು ಮಂಗಳವಾರ ಸಂಜೆ ತಂದೆ ಜೊತೆ ಅರೇಹಳ್ಳಿಗೆ ಬಂದಿದ್ದಳು. ಈ ವೇಳೆ, ಪ್ರಜ್ವಲ್ ಹಾಗೂ ಆತನ ಸ್ನೇಹಿತರು ಅಡ್ಡಹಾಕಿ ಯುವತಿಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ.
Daughter Abducted in Front of Father, Shocking Incident in Belur at Hassan as Goons Drag Father into Car While He Fights to Save He
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm