ಬ್ರೇಕಿಂಗ್ ನ್ಯೂಸ್
14-05-25 05:16 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 14 : ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದ ಆರೋಪಿಯನ್ನು ವೈಟ್ಫೀಲ್ಡ್ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಛತ್ತೀಸ್ಗಢ ಮೂಲದ ಶುಭಾಂಶು ಶುಕ್ಲಾ (26) ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇ. 9ರಂದು ವೈಟ್ಫೀಲ್ಡ್ನ ಪ್ರಶಾಂತ್ ಲೇಔಟ್ನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಆರೋಪ ಕೇಳಿಬಂದಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರತಿಯಾಗಿ ಮೇ 7ರಂದು ಭಾರತೀಯ ರಕ್ಷಣಾ ಪಡೆಗಳು 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಮೂಲಕ ಪಾಕಿಸ್ತಾನದಲ್ಲಿನ ಭಯೋತ್ಪಾದಕರ ನೆಲೆಗಳನ್ನು ನಾಶಪಡಿಸಿದ್ದವು.
ಭಾರತೀಯ ಕಾರ್ಯಾಚರಣೆಯ ಯಶಸ್ಸನ್ನು ಮೇ 9ರಂದು ಪ್ರಶಾಂತ್ ಲೇಔಟ್ನಲ್ಲಿ ಯುವಕರು ಸಂಭ್ರಮಿಸುತ್ತಿದ್ದರು. ಈ ವೇಳೆ ಪಿ.ಜಿಯ ಬಾಲ್ಕನಿಯಲ್ಲಿ ನಿಂತಿದ್ದ ಶುಭಾಂಶು ಶುಕ್ಲಾ, ಪಾಕ್ ಪರ ಘೋಷಣೆ ಕೂಗಿದ್ದಾರೆ. ಪಾಕ್ ಪರ ಘೋಷಣೆ ಕೇಳಿ ಗಾಬರಿಗೊಂಡ ಯುವಕರು ಗಮನಿಸಿದಾಗ ಇಬ್ಬರು ಯುವಕರು ಕಟ್ಟಡವೊಂದರ ಬಾಲ್ಕನಿಯಲ್ಲಿ ನಿಂತು ಕೃತ್ಯ ಎಸಗಿದ್ದಾರೆ ಎಂದು ಪೊಲೀಸ್ ಸಹಾಯವಾಣಿಗೆ ಸ್ಥಳೀಯ ಯುವಕರು ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಧಾವಿಸಿದ ವೈಟ್ಫೀಲ್ಡ್ ಠಾಣೆ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಿಸಿದಾಗ ಶುಭಾಂಶು ಶುಕ್ಲಾ ಪಾಕ್ ಪರ ಘೋಷಣೆ ಕೂಗಿರುವುದು ಖಚಿತವಾಗಿದೆ. ಆರೋಪಿ ಶುಭಾಂಶು ಶುಕ್ಲಾ ಬೆಂಗಳೂರಿನ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದ, ಸದ್ಯ ಪ್ರಕರಣ ದಾಖಲಿಸಿಕೊಂಡು ಆತನನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಪರೇಷನ್ ಸಿಂಧೂರ ಬಗ್ಗೆ ಸ್ಟೇಟಸ್ ಹಾಕಿದಾತನ ವಿರುದ್ಧ ಪ್ರಕರಣ:
ಮತ್ತೊಂದೆಡೆ, ಆಪರೇಷನ್ ಸಿಂಧೂರ ವಿರೋಧಿಸಿ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದ ಆರೋಪದ ಮೇಲೆ ಶಿವಮೊಗ್ಗದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದರು. ಈತನ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 26-year-old techie from Chhattisgarh has been arrested by Whitefield police for allegedly shouting pro-Pakistan slogans in the city. The accused, identified as Shubhamshu Shukla, was taken into custody following complaints from the public.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm