ಬ್ರೇಕಿಂಗ್ ನ್ಯೂಸ್
15-05-25 11:59 am HK News Desk ಕರ್ನಾಟಕ
ವಿಜಯಪುರ, ಮೇ 15: ಮಹಾತ್ಮ ಗಾಂಧಿ ಭಾರತದ ರಾಷ್ಟ್ರಪಿತ ಅಲ್ಲ; ಪಾಕಿಸ್ತಾನದ ರಾಷ್ಟ್ರಪಿತ...ಮಹಾತ್ಮ ಗಾಂಧಿ ಹುಟ್ಟಿಸಿರುವ ಕೂಸೇ ಪಾಕಿಸ್ತಾನ. ಮುಸ್ಲಿಂರಿಗಾಗಿ ಪಾಕಿಸ್ತಾನ ಕೊಟ್ಟಿದ್ದಾರೆ...' ಎಂದೆಲ್ಲಾ ಮಾತನಾಡಿರುವ ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮೇಲೆ ಎಫ್ಐಆರ್ ದಾಖಲಾಗಿದೆ.
ಮೇ 12 ರಂದು ಆದರ್ಶ ನಗರದ ಬಸವೇಶ್ವರ ದೇವಸ್ಥಾನ ಕಾಮಗಾರಿಯ ಭೂಮಿ ಪೂಜೆ ಸಂದರ್ಭದಲ್ಲಿ ಶಾಸಕ ಯತ್ನಾಳ ಮಾತನಾಡುತ್ತಾ ಮಹಾತ್ಮ ಗಾಂಧಿಯವರನ್ನು ಅವಹೇಳನ ಮಾಡಿದ್ದಾರೆ. ಆಧಾರ ರಹಿತ ಆರೋಪಗಳನ್ನು ಮಾಡಿ ರಾಷ್ಟ್ರ ನಾಯಕರಿಗೆ ಅವಮಾನ ಮಾಡಿದ್ದಾರೆ. ಹೀಗಾಗಿ ಯತ್ನಾಳ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ನಗರದ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರಕರಣ ದಾಖಲಿಸಿದ್ದಾರೆ.
ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧಿಯವರನ್ನು ಏಕವಚನದಲ್ಲಿ ಸಂಬೋಧಿಸಿದ್ದಲ್ಲದೇ ಗಾಂಧಿ ಭಾರತದ ರಾಷ್ಟ್ರಪಿತ ಅಲ್ಲ; ಪಾಕಿಸ್ತಾನದ ರಾಷ್ಟ್ರಪಿತ ಎಂದು ಆಧಾರ ರಹಿತ ಆರೋಪ ಮಾಡಿದ್ದಾರೆ. ಬಸನಗೌಡ ಪಾಟೀಲ ತನ್ನ ಹಳೆಯ ಚಾಳಿಯಂತೆ ಸಮಾಜ ಒಡೆಯುವ ಉದ್ದೇಶದಿಂದ ಸಮಾಜದಲ್ಲಿ ದಂಗೆ ಎಬ್ಬಿಸುವ ಉದ್ದೇಸದಿಂದ ಜಾತಿ-ಜಾತಿಯಲ್ಲಿ ವೈಮನಸ್ಸು ಹಾಗೂ ಅಶಾಂತಿ ಹುಟ್ಟಿಸುವ ಉದ್ದೇಶದಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿಯಾಗಿ ಅವಾಚ್ಯ ಶಬ್ದಗಳನ್ನು ಬಳಸಿ ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ದೂರಿದ್ದಾರೆ.
ಗಾಂಧೀಜಿ ಭಾರತದ ದೇಶಕ್ಕೆ ಮಾತ್ರವಲ್ಲ ಇಡೀ ವಿಶ್ವದಲ್ಲಿ ಅಹಿಂಸೆ ಪ್ರತೀಕ ಎಂದು ಖ್ಯಾತರು. ಇದಕ್ಕೆ 2001 ರಲ್ಲಿ ಯುನೈಟೆಡ್ ನೇಷನ್ ವತಿಯಿಂದ ಪ್ರತಿವರ್ಷ 2 ನೇ ಅಕ್ಟೋಬರ್ ಗಾಂಧೀಜಿ ಹುಟ್ಟಿದ ದಿನವನ್ನು ವಿಶ್ವ ಅಹಿಂಸಾ ದಿನಾಚರಣೆ ಎಂದು ಘೋಷಿಸಿರುವುದೇ ಸಾಕ್ಷಿ. ಇಂತಹ ವ್ಯಕ್ತಿತ್ವದ ವಿರುದ್ಧ ಹಗುರವಾಗಿ ಮಾತನಾಡಿದ ಶಾಸಕರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.
Congress workers in Vijayapura have filed a complaint against Basanagouda R. Patil Yatnal, MLA who has been expelled from the BJP, for having allegedly insulted Mahatma Gandhi.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm