ಬ್ರೇಕಿಂಗ್ ನ್ಯೂಸ್
15-05-25 11:59 am HK News Desk ಕರ್ನಾಟಕ
ವಿಜಯಪುರ, ಮೇ 15: ಮಹಾತ್ಮ ಗಾಂಧಿ ಭಾರತದ ರಾಷ್ಟ್ರಪಿತ ಅಲ್ಲ; ಪಾಕಿಸ್ತಾನದ ರಾಷ್ಟ್ರಪಿತ...ಮಹಾತ್ಮ ಗಾಂಧಿ ಹುಟ್ಟಿಸಿರುವ ಕೂಸೇ ಪಾಕಿಸ್ತಾನ. ಮುಸ್ಲಿಂರಿಗಾಗಿ ಪಾಕಿಸ್ತಾನ ಕೊಟ್ಟಿದ್ದಾರೆ...' ಎಂದೆಲ್ಲಾ ಮಾತನಾಡಿರುವ ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮೇಲೆ ಎಫ್ಐಆರ್ ದಾಖಲಾಗಿದೆ.
ಮೇ 12 ರಂದು ಆದರ್ಶ ನಗರದ ಬಸವೇಶ್ವರ ದೇವಸ್ಥಾನ ಕಾಮಗಾರಿಯ ಭೂಮಿ ಪೂಜೆ ಸಂದರ್ಭದಲ್ಲಿ ಶಾಸಕ ಯತ್ನಾಳ ಮಾತನಾಡುತ್ತಾ ಮಹಾತ್ಮ ಗಾಂಧಿಯವರನ್ನು ಅವಹೇಳನ ಮಾಡಿದ್ದಾರೆ. ಆಧಾರ ರಹಿತ ಆರೋಪಗಳನ್ನು ಮಾಡಿ ರಾಷ್ಟ್ರ ನಾಯಕರಿಗೆ ಅವಮಾನ ಮಾಡಿದ್ದಾರೆ. ಹೀಗಾಗಿ ಯತ್ನಾಳ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ನಗರದ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರಕರಣ ದಾಖಲಿಸಿದ್ದಾರೆ.
ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧಿಯವರನ್ನು ಏಕವಚನದಲ್ಲಿ ಸಂಬೋಧಿಸಿದ್ದಲ್ಲದೇ ಗಾಂಧಿ ಭಾರತದ ರಾಷ್ಟ್ರಪಿತ ಅಲ್ಲ; ಪಾಕಿಸ್ತಾನದ ರಾಷ್ಟ್ರಪಿತ ಎಂದು ಆಧಾರ ರಹಿತ ಆರೋಪ ಮಾಡಿದ್ದಾರೆ. ಬಸನಗೌಡ ಪಾಟೀಲ ತನ್ನ ಹಳೆಯ ಚಾಳಿಯಂತೆ ಸಮಾಜ ಒಡೆಯುವ ಉದ್ದೇಶದಿಂದ ಸಮಾಜದಲ್ಲಿ ದಂಗೆ ಎಬ್ಬಿಸುವ ಉದ್ದೇಸದಿಂದ ಜಾತಿ-ಜಾತಿಯಲ್ಲಿ ವೈಮನಸ್ಸು ಹಾಗೂ ಅಶಾಂತಿ ಹುಟ್ಟಿಸುವ ಉದ್ದೇಶದಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿಯಾಗಿ ಅವಾಚ್ಯ ಶಬ್ದಗಳನ್ನು ಬಳಸಿ ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ದೂರಿದ್ದಾರೆ.
ಗಾಂಧೀಜಿ ಭಾರತದ ದೇಶಕ್ಕೆ ಮಾತ್ರವಲ್ಲ ಇಡೀ ವಿಶ್ವದಲ್ಲಿ ಅಹಿಂಸೆ ಪ್ರತೀಕ ಎಂದು ಖ್ಯಾತರು. ಇದಕ್ಕೆ 2001 ರಲ್ಲಿ ಯುನೈಟೆಡ್ ನೇಷನ್ ವತಿಯಿಂದ ಪ್ರತಿವರ್ಷ 2 ನೇ ಅಕ್ಟೋಬರ್ ಗಾಂಧೀಜಿ ಹುಟ್ಟಿದ ದಿನವನ್ನು ವಿಶ್ವ ಅಹಿಂಸಾ ದಿನಾಚರಣೆ ಎಂದು ಘೋಷಿಸಿರುವುದೇ ಸಾಕ್ಷಿ. ಇಂತಹ ವ್ಯಕ್ತಿತ್ವದ ವಿರುದ್ಧ ಹಗುರವಾಗಿ ಮಾತನಾಡಿದ ಶಾಸಕರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.
Congress workers in Vijayapura have filed a complaint against Basanagouda R. Patil Yatnal, MLA who has been expelled from the BJP, for having allegedly insulted Mahatma Gandhi.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am