ಬ್ರೇಕಿಂಗ್ ನ್ಯೂಸ್
15-05-25 10:16 pm HK News Desk ಕರ್ನಾಟಕ
ದಾವಣಗೆರೆ, ಮೇ 15 : ವಾಹನ ತಪಾಸಣೆ ವೇಳೆ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಲಾರಿ ಹರಿದು ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಹೆಬ್ಬಾಳು ಟೋಲ್ ಗೇಟ್ ಬಳಿ ನಡೆದಿತ್ತು. ರಾಮಪ್ಪ ಪೂಜಾರ್ (27) ಮೃತ ಡಿಎಆರ್ ಕಾನ್ಸ್ಟೇಬಲ್.
ಕ್ಯಾಂಟರ್ ಚಾಲಕ ವಾಹನವನ್ನು ಎಡಕ್ಕೆ ತೆಗೆದುಕೊಳ್ಳುವ ಬದಲು ಬಲಭಾಗಕ್ಕೆ ಬಂದಿದ್ದರಿಂದ ಪಿಸಿಯ ಮೇಲೆ ಅದು ಹರಿದು ಸಾವು ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದರು. ಟೋಲ್ ಗೇಟ್ ಬಳಿ ಸಿಸಿಟಿವಿ ಇರಲಿಲ್ಲ ಅಂತ ಹೇಳಿದ್ದನ್ನು ಖಡಾಖಂಡಿತವಾಗಿ ಅಲ್ಲಗಳೆದ ಅವರು ಲೇನ್ ಡಿಸಿಪ್ಲಿನ್ ಪ್ರಾಜೆಕ್ಟ್ 2022 ರಿಂದ ಕಾರ್ಯ ನಿರ್ವಹಿಸುತ್ತಿದೆ ಮತ್ತು ಯೋಜನೆ ಅಡಿ 12 ಕೆಮೆರಾಗಳನ್ನು ಅಳವಡಿಸಲಾಗಿದೆ, ಲೇನ್ ಉಲ್ಲಂಘನೆಯಂಥ ಪ್ರಕರಣ ನಡೆದರೆ ಪಿಡಿಎಂಎಸ್ ಡಿವೈಸ್ಗಳಲ್ಲಿ ಅದು ಸೆರೆಯಾಗುತ್ತದೆ ಎಂದು ಹೇಳಿದರು.
ಹೆಬ್ಬಾಳು ಟೋಲ್ ಗೇಟ್ ಬಳಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆಗೆ ಲಾರಿಯನ್ನು ತಪಾಸಣೆ ಮಾಡಲು ಹೋದ ರಾಮಪ್ಪ ಪೂಜಾರ್ ಮೇಲೆ ಚಾಲಕ ಲಾರಿ ಹರಿಸಿ ಪರಾರಿಯಾಗಿದ್ದಾನೆ. ಈ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಕಿಡಿಗೇಡಿಗಳು ಮಾಡಿದ ಅನಾಗರಿಕ ಕಾಮೆಂಟ್ಗಳು ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಉಮಾ ಪ್ರಶಾಂತ್ ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ರಾಮಪ್ಪ ಅವರ ಸಾವನ್ನು ಸಂಭ್ರಮಿಸುವಂತೆ ಅನಾಗರಿಕ ಕಾಮೆಂಟ್ಗಳನ್ನು ಮಾಡಿದ್ದಾರೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಎಸ್ಪಿ ಉಮಾ ಪ್ರಶಾಂತ್, 'ಒಬ್ಬರ ಸಾವನ್ನು ಸಂಭ್ರಮಿಸುವ ನಿಮ್ಮ ಮನಸ್ಥಿತಿಯನ್ನು ನೋಡಿದರೆ, ನಿಮ್ಮ ಗುಣಲಕ್ಷಣ ಏನೆಂದು ತಿಳಿಯುತ್ತದೆ. ಎಲ್ಲೋ ಕುಳಿತು ಪೊಲೀಸ್ ಇಲಾಖೆಯ ಬಗ್ಗೆ ಅಪಪ್ರಚಾರ ಮಾಡುವ ಬದಲು, ಏನಾದರೂ ದೂರು ಇದ್ದರೆ ಠಾಣೆಗೆ ಬಂದು ದೂರು ಸಲ್ಲಿಸಿ,' ಎಂದು ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಪೊಲೀಸ್ ಇಲಾಖೆಯವರು ಎಷ್ಟೇ ಒಳ್ಳೆಯದು ಮಾಡಿದರು ನಮ್ಮ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡ್ತೀರಿ ಎಂದು ಕಿಡಿ ಕಾರಿದರು. ಪೊಲೀಸ್ ಇಲಾಖೆ ಬಗ್ಗೆ ಯಾರೆಲ್ಲ ಕೆಟ್ಟದಾಗಿ ಕಾಮೆಂಟ್ ಮಾಡುತ್ತಿದ್ದಾರೋ ಅವರ ವಿರುದ್ಧ ಸರಿಯಾದ ಕಾನೂನು ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.
In the wake of a constable's death, Davangere Superintendent of Police (SP) has issued a stern warning against those posting negative and defamatory comments on social media platforms. The SP expressed her displeasure over the nature of several posts and said such behavior will not be tolerated.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm