ಬ್ರೇಕಿಂಗ್ ನ್ಯೂಸ್
20-05-25 03:30 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20 : ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗಿದ್ದು ಎಲ್ಲಿ ನೋಡಿದರೂ ನೀರೇ ನೀರು ಎನ್ನುವಂತಾಗಿದೆ. ಒಂದೇ ಮಳೆಗೆ ಬೆಂದಕಾಳೂರಿನ ಜನರು ತತ್ತರಿಸಿದ್ದು ಬೆಂದು ಹೋಗಿದ್ದಾರೆ.
ಭಾರೀ ಮಳೆಯಿಂದಾಗಿ ಬೆಂಗಳೂರು ನಗರದಲ್ಲಿ ಅಂದಾಜು 500ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. 20 ಕೆರೆಗಳು ಉಕ್ಕಿ ಹರಿದು ಆಸುಪಾಸಿನ ಬಡಾವಣೆಗಳನ್ನು ಜಲಾವೃತವಾಗಿಸಿವೆ. ಮಧುವನ ಅಪಾರ್ಟ್ಮೆಂಟ್, ಡಾಲರ್ಸ್ ಕಾಲೋನಿ, ಬಿಟಿಎಂ ಲೇಔಟ್ನಲ್ಲಿ ಮಳೆ ನೀರು ತುಂಬಿಕೊಂಡಿದೆ. ಮಳೆಯಿಂದಾಗಿ 63 ವರ್ಷದ ಮನಮೋಹನ್ ಕಾಮತ್, ಭದ್ರತಾ ಸಿಬ್ಬಂದಿ ಮಗ 12 ವರ್ಷದ ದಿನೇಶ್ ಸೇರಿ ಮೂವರು ಮೃತ ಮೃತಪಟ್ಟಿದ್ದಾರೆ.
ವರುಣನ ಆರ್ಭಟಕ್ಕೆ ಸಾಯಿ ಲೇಔಟ್ನ ಜನರು ಹೈರಾಣಾಗಿ ಹೋಗಿದ್ದಾರೆ. ಜಲಾವೃತಗೊಂಡ ಮನೆಯಲ್ಲಿ ಸಿಲುಕಿದ್ದ ಜನರನ್ನು ರಕ್ಷಣಾ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಶ್ವಾನಗಳು, ಹಸುಗಳು ಮಳೆ ನೀರಿನಲ್ಲಿ ಪರದಾಡುವ ಸ್ಥಿತಿ ಉಂಟಾಗಿದೆ. ಬಿಬಿಎಂಪಿ ಸಿಬ್ಬಂದಿ ಬೋಟ್ನಲ್ಲಿ ತೆರಳಿ ಮನೆಯಲ್ಲಿ ಸಿಲುಕಿದವರನ್ನು ರಕ್ಷಣೆ ಮಾಡುವುದರ ಜೊತೆಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದಾರೆ.
ನಂದಗೋಕುಲ ಲೇಔಟ್ನಲ್ಲೂ ಮಳೆ ಹೊಡೆತಕ್ಕೆ ಜನರು ಕುಸಿದು ಹೋಗಿದ್ದಾರೆ. ನಾಗವಾರ ಎಲಿಮೆಂಟ್ಸ್ ಮಾಲ್ ಎದುರು ನೀರು ನಿಂತು ಕೆರೆಯಂತಾಗಿದ್ದು ಜನರು ಓಡಾಡಲು ಪರದಾಡುತ್ತಿದ್ದಾರೆ. ಅಲ್ಲದೆ ನಗರದ ಪ್ರತಿಷ್ಠಿತ ಹೆಚ್ಎಸ್ಆರ್ ಲೇಔಟ್ನಲ್ಲೂ ಜಲಪ್ರವಾಹ ಉಂಟಾಗಿದೆ. ಧಾರಾಕಾರ ಮಳೆಯಿಂದಾಗಿ ಕಟ್ಟಡಗಳ ನೆಲ ಅಂತಸ್ತಿಗೆ ಮಳೆ ನೀರು ನುಗ್ಗಿದ್ದು, ನೆಲಮಹಡಿಯಲ್ಲಿರುವ ಕುಟುಂಬಗಳ ಸಂಕಷ್ಟಕ್ಕೀಡಾಗಿದ್ದಾರೆ. ಮೂರು ಜನರೇಟರ್, ಎರಡು ಬೈಕ್, ಇನ್ನಿತರ ಪ್ರಮುಖ ದಾಖಲೆಗಳು ನೀರುಪಾಲಾಗಿವೆ.
ದೀಪಿಕಾ ಲೇಔಟ್ನಲ್ಲೂ ಇದೇ ಸ್ಥಿತಿ ನಿರ್ಮಾಣವಾಗಿದ್ದು ಜನರು ನಲುಗಿ ಹೋಗಿದ್ದಾರೆ. ಮನೆ ವಸ್ತುಗಳು ನೀರಿನಲ್ಲಿ ತೇಲಿಕೊಂಡು ಹೋಗುತ್ತಿದ್ದು, ರಕ್ಷಣೆಗೆ ಜನ ಸುಸ್ತಾಗಿ ಹೋಗಿದ್ದಾರೆ. ಮಳೆಯಿಂದಾಗಿ ಹೆಣ್ಣೂರು ಕೂಡ ಜಲಾವೃತಗೊಂಡಿದೆ. ಮನೆ, ರಸ್ತೆ ಮಾತ್ರವಲ್ಲದೆ ಅನಾಥಾಶ್ರಮ ಕೂಡ ಜಲಾವೃತ ಆಗಿದೆ. ಅಡುಗೆ ಮನೆಗೂ ನೀರು ನುಗ್ಗಿದ್ದು ವೃದ್ಧ ಜನರ ಪರಿಸ್ಥಿತಿ ಕರಳು ಹಿಂಡುವಂತಿದೆ. ಜೊತೆಗೆ ಕೆಆರ್ ಸರ್ಕಲ್ ಕೂಡ ಜಲಾವೃತಗೊಂಡಿದ್ದು, ವಿಶ್ವೇಶ್ವರ್ ಕಾಲೇಜು ಬಳಿ ಬಸ್ಸ್ಟಾಂಡ್ ಧರಗೆ ಉರುಳಿದೆ. ಬೆಳಗ್ಗೆ ಈ ಘಟನೆ ನಡೆದಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.
Heavy downpour in Bengaluru for the past 36 hours threw life out of gear here on Tuesday as well. People were seen walking through knee-deep water and traffic jams were reported in many places. The rain-related toll went up to five in the state, officials said.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm