ಬ್ರೇಕಿಂಗ್ ನ್ಯೂಸ್
21-05-25 11:33 am HK News Desk ಕರ್ನಾಟಕ
ವಿಜಯಪುರ, ಮೇ 21 : ಮನಗೂಳಿ ಬಳಿ ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಧಾರುಣವಾಗಿ ಸಾವಿಗೀಡಾಗಿದ್ದಾರೆ.
ಮಹಿಂದ್ರಾ TUV 300 ನಲ್ಲಿದ ತೆಲಂಗಾಣದ ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ.ಭಾಸ್ಕರನ್ ಹಾಗೂ ಅವರ ಪತ್ನಿ ಪವಿತ್ರಾ, ಮಗಳು ಜೋಸ್ನಾ, ಚಾಲಕ ವಿಜಯಪುರ ಜಿಲ್ಲೆಯ ಹೊರ್ತಿಯ ವಿಕಾಸ ಶಿವಪ್ಪ ಮಕನಿ ಹಾಗೂ ವಿಆರ್ಎಲ್ ಬಸ್ ಚಾಲಕ ಕಲಗುಟಗಿ ತಾಂಡಾದ ಬಸವರಾಜ ರಾಠೋಡ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.



ಭಾಸ್ಕರನ್ ಅವರ ಪುತ್ರ ಪ್ರವೀಣತೇಜ ಹಾಗೂ ಲಾರಿ ಚಾಲಕ ಹುಲಜಂತಿಯ ಚನ್ನಬಸು ಸಿದ್ದಪ್ಪ ಮಾಳಿ ಗಾಯಗೊಂಡಿದ್ದು, ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಲಾಪುರದತ್ತ ತೆರಳುತ್ತಿದ್ದ ಮಹೀಂದ್ರಾ ಕಾರು ಆರಂಭದಲ್ಲಿ ಹೆದ್ದಾರಿ ಡಿವೈಡರ್ಗೆ ಡಿಕ್ಕಿ ಹೊಡೆದು ಹಾರಿ, ಮುಂಬೈನಿಂದ ಬಳ್ಳಾರಿಗೆ ತೆರಳುತ್ತಿದ್ದ ವಿಆರ್ಎಲ್ ಬಸ್ಗೆ ಡಿಕ್ಕಿ ಹೊಡೆದಿದೆ. ಬಳಿಕ ಇದೇ ಮಾರ್ಗದಲ್ಲಿ ಬರುತ್ತಿದ್ದ ಲಾರಿಗೂ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಹಾಗೂ ಬಸ್ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ವಿಆರ್ ಎಲ್ ಬಸ್ನಲ್ಲಿ ಸಾಕಷ್ಟು ಪ್ರಯಾಣಿಕರು ಇದ್ದರು. ಆದರೆ ಚಾಲಕ ಭಾರೀ ಅಪಘಾತವಾಗುವುದನ್ನು ತಪ್ಪಿಸಿ ಅಲ್ಲಿದ್ದವರ ಜೀವ ಉಳಿಸಿ ತನ್ನ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.
ಬೆಳಗಿನ ಜಾವವಾಗಿದ್ದರಿಂದ ಏನಾಯಿತು ಎನ್ನುವುದು ಗೊತ್ತಾಗಲಿಲ್ಲ.ಏಕಾಏಕಿ ಭಾರೀ ಶಬ್ದ ಕೇಳಿತು. ನಮ್ಮ ಬಸ್ ಪಕ್ಕಕ್ಕೆ ನಿಂತಿತ್ತು. ಹೊರಗೆ ಇಳಿದು ನೋಡಿದರೆ ವಾಹನಗಳ ನಡುವೆ ಅಪಘಾತ ಆಗಿರುವುದು ಕಂಡು ಬಂದಿತು.ಅಪಘಾತದ ಸನ್ನಿವೇಶ ನೋಡಿ ಭಯವಾಯಿತು ಎಂದು ಪ್ರತ್ಯಕ್ಷದರ್ಶಿಗಳು ವಿವರಣೆ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Accident in Vijaypura, Mahindra TUV 300 Crashes into Divider, Collides with VRL Volvo Bus and Truck, 5 Killed on Spot. According to Laxman Nimbargi, Superintendent Of Police, Vijaypura , a Mahindra SUV 300 vehicle traveling towards Solapur jumped the median and collided with a private bus coming from Mumbai to Ballari.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm