ಬ್ರೇಕಿಂಗ್ ನ್ಯೂಸ್
21-05-25 11:33 am HK News Desk ಕರ್ನಾಟಕ
ವಿಜಯಪುರ, ಮೇ 21 : ಮನಗೂಳಿ ಬಳಿ ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಧಾರುಣವಾಗಿ ಸಾವಿಗೀಡಾಗಿದ್ದಾರೆ.
ಮಹಿಂದ್ರಾ TUV 300 ನಲ್ಲಿದ ತೆಲಂಗಾಣದ ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ.ಭಾಸ್ಕರನ್ ಹಾಗೂ ಅವರ ಪತ್ನಿ ಪವಿತ್ರಾ, ಮಗಳು ಜೋಸ್ನಾ, ಚಾಲಕ ವಿಜಯಪುರ ಜಿಲ್ಲೆಯ ಹೊರ್ತಿಯ ವಿಕಾಸ ಶಿವಪ್ಪ ಮಕನಿ ಹಾಗೂ ವಿಆರ್ಎಲ್ ಬಸ್ ಚಾಲಕ ಕಲಗುಟಗಿ ತಾಂಡಾದ ಬಸವರಾಜ ರಾಠೋಡ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.



ಭಾಸ್ಕರನ್ ಅವರ ಪುತ್ರ ಪ್ರವೀಣತೇಜ ಹಾಗೂ ಲಾರಿ ಚಾಲಕ ಹುಲಜಂತಿಯ ಚನ್ನಬಸು ಸಿದ್ದಪ್ಪ ಮಾಳಿ ಗಾಯಗೊಂಡಿದ್ದು, ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಲಾಪುರದತ್ತ ತೆರಳುತ್ತಿದ್ದ ಮಹೀಂದ್ರಾ ಕಾರು ಆರಂಭದಲ್ಲಿ ಹೆದ್ದಾರಿ ಡಿವೈಡರ್ಗೆ ಡಿಕ್ಕಿ ಹೊಡೆದು ಹಾರಿ, ಮುಂಬೈನಿಂದ ಬಳ್ಳಾರಿಗೆ ತೆರಳುತ್ತಿದ್ದ ವಿಆರ್ಎಲ್ ಬಸ್ಗೆ ಡಿಕ್ಕಿ ಹೊಡೆದಿದೆ. ಬಳಿಕ ಇದೇ ಮಾರ್ಗದಲ್ಲಿ ಬರುತ್ತಿದ್ದ ಲಾರಿಗೂ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಹಾಗೂ ಬಸ್ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ವಿಆರ್ ಎಲ್ ಬಸ್ನಲ್ಲಿ ಸಾಕಷ್ಟು ಪ್ರಯಾಣಿಕರು ಇದ್ದರು. ಆದರೆ ಚಾಲಕ ಭಾರೀ ಅಪಘಾತವಾಗುವುದನ್ನು ತಪ್ಪಿಸಿ ಅಲ್ಲಿದ್ದವರ ಜೀವ ಉಳಿಸಿ ತನ್ನ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.
ಬೆಳಗಿನ ಜಾವವಾಗಿದ್ದರಿಂದ ಏನಾಯಿತು ಎನ್ನುವುದು ಗೊತ್ತಾಗಲಿಲ್ಲ.ಏಕಾಏಕಿ ಭಾರೀ ಶಬ್ದ ಕೇಳಿತು. ನಮ್ಮ ಬಸ್ ಪಕ್ಕಕ್ಕೆ ನಿಂತಿತ್ತು. ಹೊರಗೆ ಇಳಿದು ನೋಡಿದರೆ ವಾಹನಗಳ ನಡುವೆ ಅಪಘಾತ ಆಗಿರುವುದು ಕಂಡು ಬಂದಿತು.ಅಪಘಾತದ ಸನ್ನಿವೇಶ ನೋಡಿ ಭಯವಾಯಿತು ಎಂದು ಪ್ರತ್ಯಕ್ಷದರ್ಶಿಗಳು ವಿವರಣೆ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Accident in Vijaypura, Mahindra TUV 300 Crashes into Divider, Collides with VRL Volvo Bus and Truck, 5 Killed on Spot. According to Laxman Nimbargi, Superintendent Of Police, Vijaypura , a Mahindra SUV 300 vehicle traveling towards Solapur jumped the median and collided with a private bus coming from Mumbai to Ballari.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm