ಬ್ರೇಕಿಂಗ್ ನ್ಯೂಸ್
21-05-25 01:50 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 21 : ಗೃಹ ಸಚಿವ ಪರಮೇಶ್ವರ್ ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು (ಇಡಿ) ಶಾಕ್ ನೀಡಿದ್ದಾರೆ. ಅವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನೆಲಮಂಗಳಾದ ಹೆಗ್ಗೆರೆ ಬಳಿಯಿರುವ ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಮೆಡಿಕಲ್ ಕಾಲೇಜು ಹಾಗೂ ತುಮಕೂರಿನ ಎಸ್ ಎಸ್ ಐಟಿ ಕಾಲೇಜು ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ, ನೆಲಮಂಗಲದ ಟಿ.ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ದಾಳಿಯಾಗಿದೆ.

ಇಂದು ಬೆಳಗ್ಗೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮೂರು ಕಾರುಗಳಲ್ಲಿ ಬಂದ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಎಸ್ಎಸ್ಐಟಿ ಕಾಲೇಜಿನಲ್ಲಿ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಇದೇ ವೇಳೆ, ಮಾಧ್ಯಮ ಪ್ರತಿನಿಧಿಗಳು ಕಾಲೇಜು ಆವರಣದ ಒಳಗೆ ಬಾರದಂತೆ ಡಿವೈಎಸ್ಪಿ ತಾಕೀತು ಮಾಡಿದ್ದಾರೆ.
ಈ ಹಿಂದೆಯೂ, ಅಂದ್ರೆ 2019ರಲ್ಲಿ ಆದಾಯ ತೆರಿಗೆ ಇಲಾಖೆ ಇದೇ ಸಂಸ್ಥೆಗಳ ಮೇಲೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಾಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಬಳಿಕ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು.
ಪರಮೇಶ್ವರ್ ಅವರಿಗೆ ಕರ್ನಾಟಕ ಪೊಲೀಸ್ ವಸತಿ ನಿಗಮದ ಮಹಾನಿರ್ದೇಶಕರಾಗಿರುವ ಡಾ.ರಾಮಚಂದ್ರರಾವ್ ಆಪ್ತರು. ಅವರ ಪುತ್ರಿ ರನ್ಯಾ ರಾವ್ ಕೆಲ ತಿಂಗಳ ಹಿಂದೆ ಚಿನ್ನ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ಳು. ಈ ವಹಿವಾಟಿನ ಹಣ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳಿಗೆ ಬಂದಿರಬಹುದಾ ಎನ್ನುವ ಲಿಂಕ್ ಆಧರಿಸಿ ದಾಳಿ ನಡೆಸಿರಬಹುದು ಎಂದು ಪರಮೇಶ್ವರ್ ಅವರ ಆಪ್ತ ಮೂಲಗಳು ತಿಳಿಸಿವೆ.
ಇದಲ್ಲದೇ ಪರಮೇಶ್ವರ್ ಎಚ್ಎಸ್ಎಂ ಎಂಜಿನಿಯರಿಂಗ್ ಕಾಲೇಜನ್ನು ಕೆಲ ದಿನಗಳ ಹಿಂದೆ ಖರೀದಿಸಿದ್ದು. ಇದರ ವಹಿವಾಟು ಏನಾದರೂ ಇರಬಹುದಾ ಎನ್ನುವ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ ಎನ್ನಲಾಗುತ್ತಿದೆ.
The Enforcement Directorate on Wednesday conducted searches at a medical college and an educational institute in Tumakuru, linked to Karnataka Home Minister G Parameshwara, in a money laundering case connected to Kannada film actor Ranya Rao’s gold smuggling case.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am