ಬ್ರೇಕಿಂಗ್ ನ್ಯೂಸ್
21-05-25 01:50 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 21 : ಗೃಹ ಸಚಿವ ಪರಮೇಶ್ವರ್ ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು (ಇಡಿ) ಶಾಕ್ ನೀಡಿದ್ದಾರೆ. ಅವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನೆಲಮಂಗಳಾದ ಹೆಗ್ಗೆರೆ ಬಳಿಯಿರುವ ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಮೆಡಿಕಲ್ ಕಾಲೇಜು ಹಾಗೂ ತುಮಕೂರಿನ ಎಸ್ ಎಸ್ ಐಟಿ ಕಾಲೇಜು ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ, ನೆಲಮಂಗಲದ ಟಿ.ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ದಾಳಿಯಾಗಿದೆ.

ಇಂದು ಬೆಳಗ್ಗೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮೂರು ಕಾರುಗಳಲ್ಲಿ ಬಂದ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಎಸ್ಎಸ್ಐಟಿ ಕಾಲೇಜಿನಲ್ಲಿ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಇದೇ ವೇಳೆ, ಮಾಧ್ಯಮ ಪ್ರತಿನಿಧಿಗಳು ಕಾಲೇಜು ಆವರಣದ ಒಳಗೆ ಬಾರದಂತೆ ಡಿವೈಎಸ್ಪಿ ತಾಕೀತು ಮಾಡಿದ್ದಾರೆ.
ಈ ಹಿಂದೆಯೂ, ಅಂದ್ರೆ 2019ರಲ್ಲಿ ಆದಾಯ ತೆರಿಗೆ ಇಲಾಖೆ ಇದೇ ಸಂಸ್ಥೆಗಳ ಮೇಲೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಾಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಬಳಿಕ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು.
ಪರಮೇಶ್ವರ್ ಅವರಿಗೆ ಕರ್ನಾಟಕ ಪೊಲೀಸ್ ವಸತಿ ನಿಗಮದ ಮಹಾನಿರ್ದೇಶಕರಾಗಿರುವ ಡಾ.ರಾಮಚಂದ್ರರಾವ್ ಆಪ್ತರು. ಅವರ ಪುತ್ರಿ ರನ್ಯಾ ರಾವ್ ಕೆಲ ತಿಂಗಳ ಹಿಂದೆ ಚಿನ್ನ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ಳು. ಈ ವಹಿವಾಟಿನ ಹಣ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳಿಗೆ ಬಂದಿರಬಹುದಾ ಎನ್ನುವ ಲಿಂಕ್ ಆಧರಿಸಿ ದಾಳಿ ನಡೆಸಿರಬಹುದು ಎಂದು ಪರಮೇಶ್ವರ್ ಅವರ ಆಪ್ತ ಮೂಲಗಳು ತಿಳಿಸಿವೆ.
ಇದಲ್ಲದೇ ಪರಮೇಶ್ವರ್ ಎಚ್ಎಸ್ಎಂ ಎಂಜಿನಿಯರಿಂಗ್ ಕಾಲೇಜನ್ನು ಕೆಲ ದಿನಗಳ ಹಿಂದೆ ಖರೀದಿಸಿದ್ದು. ಇದರ ವಹಿವಾಟು ಏನಾದರೂ ಇರಬಹುದಾ ಎನ್ನುವ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ ಎನ್ನಲಾಗುತ್ತಿದೆ.
The Enforcement Directorate on Wednesday conducted searches at a medical college and an educational institute in Tumakuru, linked to Karnataka Home Minister G Parameshwara, in a money laundering case connected to Kannada film actor Ranya Rao’s gold smuggling case.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm