ಬ್ರೇಕಿಂಗ್ ನ್ಯೂಸ್
21-05-25 09:16 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 21 : ಓಲಾ ಕಂಪನಿಯ ಎಐ ವಿಭಾಗದಲ್ಲಿ ಮೆಷಿನ್ ಲರ್ನಿಂಗ್ ಎಂಜಿನಿಯರ್ ಆಗಿದ್ದ ಮಹಾರಾಷ್ಟ್ರ ಮೂಲದ ನಿಖಿಲ್ ಸೋಮವಂಶಿ(24) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಎರಡು ವಾರಗಳ ಬಳಿಕ ಸಂಚಲನ ಎಬ್ಬಿಸಿದೆ. ಆತ್ಮಹತ್ಯೆಗೆ ಕಂಪನಿಯ ಮ್ಯಾನೇಜರ್ ಕಿರುಕುಳ ಕಾರಣ ಎನ್ನುವ ಮಾಹಿತಿ ಒಂದೆಡೆಯಾದರೆ, ಸಾವಿಗೂ ಮುನ್ನ, ತಾನು ಅಪಘಾತದಲ್ಲಿ ಮೃತಪಟ್ಟಿರುವುದಾಗಿ ಸಂಬಂಧಿಕರಿಗೆ ತಿಳಿಸುವಂತೆ ರೂಮ್ಮೇಟ್ಗೆ ಸಂದೇಶ ಕಳುಹಿಸಿದ್ದರು ಎಂಬ ಅಂಶ ಚರ್ಚೆಗೆ ಕಾರಣವಾಗಿದೆ.
ಮಹಾರಾಷ್ಟ್ರದ ಜಲಗಾಂವ್ ಮೂಲದ ಸೋಮವಂಶಿ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ವಾಸವಿದ್ದರು. ಮೇ 7ರಂದು ಕೊಠಡಿ ತೊರೆದಿದ್ದು, ಅವರ ಮೃತದೇಹ ಮೇ 8ರಂದು ಅಗರ ಕೆರೆಯಲ್ಲಿ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಇವರ ಆತ್ಮಹತ್ಯೆಗೆ ಕಂಪನಿಯ ಕಠಿಣ ಕೆಲಸದ ಒತ್ತಡ ಮತ್ತು ಕಿರುಕುಳ ನೀಡುತ್ತಿದ್ದ ಮ್ಯಾನೇಜರ್ ಕಾರಣ ಎಂದು ಆರೋಪ ಕೇಳಿಬಂದಿದೆ.
ಆಗಸ್ಟ್ 2024 ರಲ್ಲಿ ಓಲಾ ಕಂಪನಿಯ ಕ್ರುಟ್ರಿಮ್ಗೆ ಫ್ರೆಶರ್ ಆಗಿ ಸೇರಿದ್ದ ಸೋಮವಂಶಿ ಅವರಿಗೆ ಇಬ್ಬರು ಸಹೋದ್ಯೋಗಿಗಳ ರಾಜೀನಾಮೆ ನಂತರ ಟೀಂ ಲೀಡರ್ ಹುದ್ದೆ ವಹಿಸಲಾಗಿತ್ತು ಎಂದು ರೆಡ್ಡಿಟ್ ಜಾಲತಾಣದಲ್ಲಿ ಬಳಕೆದಾರರು ಬರೆದುಕೊಂಡಿದ್ದಾರೆ. ಇದೇ ವೇಳೆ, ರಾಜ್ಕಿರಣ್ ಪನುಗಂಟಿ ಎಂದು ಗುರುತಿಸಲಾದ ಅಮೆರಿಕ ಮೂಲದ ಕಂಪನಿ ಮ್ಯಾನೇಜರ್ ಜೂನಿಯರ್ ಸಿಬ್ಬಂದಿಗೆ ನಿರಂತರ ನಿಂದಿಸುತ್ತ ಒತ್ತಡ ಹೇರುತ್ತಿದ್ದರು ಎಂದು ಜಾಲತಾಣದಲ್ಲಿ ಆರೋಪಿಸಲಾಗಿದೆ.
ಇಂಜಿನಿಯರ್ ಸಾವಿನ ನಂತರವೂ ಕಂಪನಿಯಲ್ಲಿ ಯಾವುದೇ ವಿಮರ್ಶೆ ನಡೆದಿಲ್ಲ. ಘಟನೆ ಬಗ್ಗೆ ಚರ್ಚಿಸದಂತೆ ನೌಕರರಿಗೆ ಎಚ್ಚರಿಕೆ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ.
ಮ್ಯಾನೇಜರ್ ಹೊಸಬರನ್ನು ದಬ್ಬಾಳಿಕೆಯ ಧಾಟಿಯಲ್ಲಿ ನೋಡುತ್ತಿದ್ದರು. ಇದರಿಂದ ಒತ್ತಡದ ಸನ್ನಿವೇಶ ಸೃಷ್ಟಿಯಾಗಿತ್ತು. ಮ್ಯಾನೇಜರ್ ವರ್ತನೆಯಿಂದ ಬೇಸತ್ತು ಹಲವರು ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಹಲವರು ಇದರಿಂದ ನೊಂದುಕೊಂಡಿದ್ದಾರೆ ಎಂದು ಕೆಲವು ಬಳಕೆದಾರರು ಪೋಸ್ಟ್ ಮಾಡಿದ್ದಾರೆ.
Nearly two weeks after a machine learning engineer at Ola Krutrim, the company’s AI arm, was found dead in Bengaluru, allegations have cropped up on social media suggesting that the 25-year-old died by suicide due to “work pressure”.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am