ಬ್ರೇಕಿಂಗ್ ನ್ಯೂಸ್
22-05-25 12:41 pm HK News Desk ಕರ್ನಾಟಕ
ಬಾಗಲಕೋಟೆ, ಮೇ 22 : ಮಂಗಗಳು ಮನುಷ್ಯರಷ್ಟೇ ಬುದ್ಧಿವಂತ ಜೀವಿಗಳು ಎಂಬುದು ಎಲ್ಲರಿಗೂ ತಿಳಿದಿದೆ. ಮಾತನಾಡಲು ಬರುವುದಿಲ್ಲ ಅಷ್ಟೇ ಆದರೆ, ಮನಷ್ಯನಂತೆ ಯೋಚಿಸುವ ಮತ್ತು ಕೆಲಸ ಮಾಡುವ ಸಾಮರ್ಥ್ಯವಿದೆ. ಅಲ್ಲದೆ, ಮನುಷ್ಯನೊಂದಿಗೆ ತನ್ನದೇ ಶೈಲಿಯಲ್ಲಿ ಸಂವಹನ ನಡೆಸುವ ಕಲೆಯನ್ನು ಸಹ ಮಂಗಗಳು ಹೊಂದಿವೆ.
ಇದು ಆಗಾಗ ಸಾಬೀತು ಕೂಡ ಆಗಿದ್ದು, ಇದೀಗ ಮತ್ತೊಮ್ಮೆ ಸಾಬೀತಾಗಿದೆ.
ಅಂದಹಾಗೆ, ಮನುಷ್ಯನಿಗೆ ಏನಾದರೂ ಆರೋಗ್ಯ ಸಮಸ್ಯೆಯಾದರೆ ತಕ್ಷಣ ಆಸ್ಪತ್ರೆಗೆ ಹೋಗುತ್ತಾನೆ. ಆದರೆ, ಮೂಕ ಪ್ರಾಣಿಗಳಿಗೆ ಸಮಸ್ಯೆಯಾದರೆ ಎಲ್ಲಿಗೆ ಹೋಗಬೇಕು? ಪಶುವೈದ್ಯಕೀಯ ಆಸ್ಪತ್ರೆಗಳಿದ್ದರು ಕೂಡ ಪ್ರಾಣಿಗಳಿಗೆ ಅದರ ಬಗ್ಗೆ ಅರಿವು ಇರುವುದಿಲ್ಲ. ಸಾಕು ಪ್ರಾಣಿಗಳಾದರೆ, ಅದರ ಮಾಲೀಕ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾನೆ. ಆದರೆ, ಸ್ವತಂತ್ರವಾಗಿ ಅಡ್ಡಾಡಿಕೊಂಡಿರುವ ಜೀವಿಗಳು ಎಲ್ಲಿಗೆ ಹೋಗಬೇಕು? ಆದರೆ, ಇಲ್ಲೊಂದು ಕೋತಿ ತಾನಾಗೇ ಪಶು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಎಲ್ಲರ ಹುಬ್ಬೇರಿಸಿದೆ.

ಹೌದು, ಕುಂಡೆ ನೋವು ಸಹಿಸಲಾರದೇ ಮಂಗವೊಂದು ತಾನಾಗೆ ಪಶು ಆಸ್ಪತ್ರೆಗೆ ಆಗಮಿಸಿದ ಅಪರೂಪದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೂಡೂರಿನಲ್ಲಿ ನಡೆದಿದೆ.
ಗೂಡೂರಿನ ಎಸ್ ಸಿ ಪಶು ಆಸ್ಪತ್ರೆಗೆ ಬಂದ ಮಂಗವೊಂದು, ಪಶು ವೈದ್ಯರಿಗೆ ತನ್ನ ಕುಂಡೆ ಕಡೆ ಕೈ ತೋರಿಸಿ, ತನ್ನ ಸಮಸ್ಯೆಯನ್ನು ಹೇಳಿಕೊಂಡಿದೆ. ತನಗಾದ ವೇದನೆಯನ್ನು ಕೈ ಸನ್ನೆ ಮೂಲಕ ಕಪಿರಾಯ ತೋರಿಸಿದ್ದಾನೆ. ತಕ್ಷಣ ಕೋತಿಯ ನೋವನ್ನು ಅರ್ಥ ಮಾಡಿಕೊಂಡ ಪಶುವೈದ್ಯ ಜಿ.ಜಿ. ಬಿಲ್ಲೋರ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆಯನ್ನು ಪಡೆದ ಮಂಗ ನಂತರ ಅಲ್ಲಿಂದ ಹೊರಟು ಹೋಯಿತು. ಈ ದೃಶ್ಯವನ್ನು ಕಂಡ ಸ್ಥಳೀಯರು ಹುಬ್ಬೇರಿಸಿದ್ದು, ಕೋತಿಯ ಬುದ್ಧಿವಂತಿಕೆಯನ್ನು ಕೊಂಡಾಡಿದ್ದಾರೆ.
Bagalkot, Monkey Visits Animal Hospital Due to bum Pain, Shows Hand to Doctor and Gets Treated.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am