ಬ್ರೇಕಿಂಗ್ ನ್ಯೂಸ್
22-05-25 12:41 pm HK News Desk ಕರ್ನಾಟಕ
ಬಾಗಲಕೋಟೆ, ಮೇ 22 : ಮಂಗಗಳು ಮನುಷ್ಯರಷ್ಟೇ ಬುದ್ಧಿವಂತ ಜೀವಿಗಳು ಎಂಬುದು ಎಲ್ಲರಿಗೂ ತಿಳಿದಿದೆ. ಮಾತನಾಡಲು ಬರುವುದಿಲ್ಲ ಅಷ್ಟೇ ಆದರೆ, ಮನಷ್ಯನಂತೆ ಯೋಚಿಸುವ ಮತ್ತು ಕೆಲಸ ಮಾಡುವ ಸಾಮರ್ಥ್ಯವಿದೆ. ಅಲ್ಲದೆ, ಮನುಷ್ಯನೊಂದಿಗೆ ತನ್ನದೇ ಶೈಲಿಯಲ್ಲಿ ಸಂವಹನ ನಡೆಸುವ ಕಲೆಯನ್ನು ಸಹ ಮಂಗಗಳು ಹೊಂದಿವೆ.
ಇದು ಆಗಾಗ ಸಾಬೀತು ಕೂಡ ಆಗಿದ್ದು, ಇದೀಗ ಮತ್ತೊಮ್ಮೆ ಸಾಬೀತಾಗಿದೆ.
ಅಂದಹಾಗೆ, ಮನುಷ್ಯನಿಗೆ ಏನಾದರೂ ಆರೋಗ್ಯ ಸಮಸ್ಯೆಯಾದರೆ ತಕ್ಷಣ ಆಸ್ಪತ್ರೆಗೆ ಹೋಗುತ್ತಾನೆ. ಆದರೆ, ಮೂಕ ಪ್ರಾಣಿಗಳಿಗೆ ಸಮಸ್ಯೆಯಾದರೆ ಎಲ್ಲಿಗೆ ಹೋಗಬೇಕು? ಪಶುವೈದ್ಯಕೀಯ ಆಸ್ಪತ್ರೆಗಳಿದ್ದರು ಕೂಡ ಪ್ರಾಣಿಗಳಿಗೆ ಅದರ ಬಗ್ಗೆ ಅರಿವು ಇರುವುದಿಲ್ಲ. ಸಾಕು ಪ್ರಾಣಿಗಳಾದರೆ, ಅದರ ಮಾಲೀಕ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾನೆ. ಆದರೆ, ಸ್ವತಂತ್ರವಾಗಿ ಅಡ್ಡಾಡಿಕೊಂಡಿರುವ ಜೀವಿಗಳು ಎಲ್ಲಿಗೆ ಹೋಗಬೇಕು? ಆದರೆ, ಇಲ್ಲೊಂದು ಕೋತಿ ತಾನಾಗೇ ಪಶು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಎಲ್ಲರ ಹುಬ್ಬೇರಿಸಿದೆ.

ಹೌದು, ಕುಂಡೆ ನೋವು ಸಹಿಸಲಾರದೇ ಮಂಗವೊಂದು ತಾನಾಗೆ ಪಶು ಆಸ್ಪತ್ರೆಗೆ ಆಗಮಿಸಿದ ಅಪರೂಪದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೂಡೂರಿನಲ್ಲಿ ನಡೆದಿದೆ.
ಗೂಡೂರಿನ ಎಸ್ ಸಿ ಪಶು ಆಸ್ಪತ್ರೆಗೆ ಬಂದ ಮಂಗವೊಂದು, ಪಶು ವೈದ್ಯರಿಗೆ ತನ್ನ ಕುಂಡೆ ಕಡೆ ಕೈ ತೋರಿಸಿ, ತನ್ನ ಸಮಸ್ಯೆಯನ್ನು ಹೇಳಿಕೊಂಡಿದೆ. ತನಗಾದ ವೇದನೆಯನ್ನು ಕೈ ಸನ್ನೆ ಮೂಲಕ ಕಪಿರಾಯ ತೋರಿಸಿದ್ದಾನೆ. ತಕ್ಷಣ ಕೋತಿಯ ನೋವನ್ನು ಅರ್ಥ ಮಾಡಿಕೊಂಡ ಪಶುವೈದ್ಯ ಜಿ.ಜಿ. ಬಿಲ್ಲೋರ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆಯನ್ನು ಪಡೆದ ಮಂಗ ನಂತರ ಅಲ್ಲಿಂದ ಹೊರಟು ಹೋಯಿತು. ಈ ದೃಶ್ಯವನ್ನು ಕಂಡ ಸ್ಥಳೀಯರು ಹುಬ್ಬೇರಿಸಿದ್ದು, ಕೋತಿಯ ಬುದ್ಧಿವಂತಿಕೆಯನ್ನು ಕೊಂಡಾಡಿದ್ದಾರೆ.
Bagalkot, Monkey Visits Animal Hospital Due to bum Pain, Shows Hand to Doctor and Gets Treated.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm