ಬ್ರೇಕಿಂಗ್ ನ್ಯೂಸ್
22-05-25 01:09 pm HK News Desk ಕರ್ನಾಟಕ
ಹಾಸನ, ಮೇ 22 : ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಹಾಸನ ಜಿಲ್ಲೆಯ ಇಬ್ಬರು ಹದಿಹರೆಯದ ಯುವಕ ಮತ್ತು ಯುವತಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದ್ದು ಅಚ್ಚರಿ ಮೂಡಿಸಿದೆ.
ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿ ಸಂಧ್ಯಾ (19) ಮತ್ತು ಅರಕಲಗೂಡು ತಾಲ್ಲೂಕಿನ ಕಾಡನೂರು ಗ್ರಾಮದ ನಿವಾಸಿ ಅಭಿಷೇಕ್ (19) ಮೃತ ದುರ್ದೈವಿಗಳು.
ಸಂಧ್ಯಾ ವೆಂಕಟೇಶ್- ಪೂರ್ಣಿಮಾ ದಂಪತಿಯ ಪುತ್ರಿಯಾಗಿದ್ದು ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು. ಸ್ನಾನಕ್ಕಾಗಿ ಬಾತ್ರೂಂಗೆ ತೆರಳಿದ್ದ ವೇಳೆ ಸಂಧ್ಯಾ ಕುಸಿದು ಬಿದ್ದಿದ್ದು ಕೆಲ ಹೊತ್ತಿನ ಬಳಿಕ ಬಾತ್ರೂಂ ಬಾಗಿಲು ಒಡೆದು ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಷ್ಟರಲ್ಲಿ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ. ಸಂಧ್ಯಾ ಕೆಲವ ವರ್ಷಗಳಿಂದ ಬಿಪಿ ಮತ್ತು ಶುಗರ್ನಿಂದ ಬಳಲುತ್ತಿದ್ದಳು.
ಮತ್ತೊಂದು ಪ್ರಕರಣದಲ್ಲಿ ಅಭಿಷೇಕ್ ಎನ್ನುವ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಅರಕಲಗೂಡು ತಾಲ್ಲೂಕಿನ, ಕಾಡನೂರು ಗ್ರಾಮದ ಅನಸೂಯ - ರಾಮಕೃಷ್ಣ ದಂಪತಿ ಪುತ್ರನಾಗಿದ್ದು ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಿಂತಿದ್ದ ಜಾಗದಲ್ಲೇ ಕುಸಿದು ಬಿದ್ದಿದ್ದು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದರು. ಅಷ್ಟರಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಒಂದೇ ದಿನ ಎರಡು ಕುಟುಂಬಗಳಲ್ಲಿ ಶಾಕ್ ಆಗಿದ್ದು ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
Separate Incidents in Hassan District, teenage Boy and Girl Die of Heart Attacks, Girl Collapses While Going for a Bath.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am