ಬ್ರೇಕಿಂಗ್ ನ್ಯೂಸ್
22-05-25 01:09 pm HK News Desk ಕರ್ನಾಟಕ
ಹಾಸನ, ಮೇ 22 : ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಹಾಸನ ಜಿಲ್ಲೆಯ ಇಬ್ಬರು ಹದಿಹರೆಯದ ಯುವಕ ಮತ್ತು ಯುವತಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದ್ದು ಅಚ್ಚರಿ ಮೂಡಿಸಿದೆ.
ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿ ಸಂಧ್ಯಾ (19) ಮತ್ತು ಅರಕಲಗೂಡು ತಾಲ್ಲೂಕಿನ ಕಾಡನೂರು ಗ್ರಾಮದ ನಿವಾಸಿ ಅಭಿಷೇಕ್ (19) ಮೃತ ದುರ್ದೈವಿಗಳು.
ಸಂಧ್ಯಾ ವೆಂಕಟೇಶ್- ಪೂರ್ಣಿಮಾ ದಂಪತಿಯ ಪುತ್ರಿಯಾಗಿದ್ದು ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು. ಸ್ನಾನಕ್ಕಾಗಿ ಬಾತ್ರೂಂಗೆ ತೆರಳಿದ್ದ ವೇಳೆ ಸಂಧ್ಯಾ ಕುಸಿದು ಬಿದ್ದಿದ್ದು ಕೆಲ ಹೊತ್ತಿನ ಬಳಿಕ ಬಾತ್ರೂಂ ಬಾಗಿಲು ಒಡೆದು ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಷ್ಟರಲ್ಲಿ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ. ಸಂಧ್ಯಾ ಕೆಲವ ವರ್ಷಗಳಿಂದ ಬಿಪಿ ಮತ್ತು ಶುಗರ್ನಿಂದ ಬಳಲುತ್ತಿದ್ದಳು.
ಮತ್ತೊಂದು ಪ್ರಕರಣದಲ್ಲಿ ಅಭಿಷೇಕ್ ಎನ್ನುವ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಅರಕಲಗೂಡು ತಾಲ್ಲೂಕಿನ, ಕಾಡನೂರು ಗ್ರಾಮದ ಅನಸೂಯ - ರಾಮಕೃಷ್ಣ ದಂಪತಿ ಪುತ್ರನಾಗಿದ್ದು ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಿಂತಿದ್ದ ಜಾಗದಲ್ಲೇ ಕುಸಿದು ಬಿದ್ದಿದ್ದು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದರು. ಅಷ್ಟರಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಒಂದೇ ದಿನ ಎರಡು ಕುಟುಂಬಗಳಲ್ಲಿ ಶಾಕ್ ಆಗಿದ್ದು ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
Separate Incidents in Hassan District, teenage Boy and Girl Die of Heart Attacks, Girl Collapses While Going for a Bath.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm