ಬ್ರೇಕಿಂಗ್ ನ್ಯೂಸ್
22-05-25 11:09 pm HK News Desk ಕರ್ನಾಟಕ
ಮಡಿಕೇರಿ, ಮೇ 22 : 2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಕೊಡಗು ಜನರಲ್ಲಿ ಅಕ್ಷರಶಃ ಭೀತಿ ಹುಟ್ಟಿಸಿತ್ತು. ಆನಂತರವೂ ಅಲ್ಲೊಂದು ಇಲ್ಲೊಂದು ಎನ್ನುವಂತೆ ಎಡವಟ್ಟು ಆಗಿತ್ತು. ಈ ಬಾರಿ ಎಂದಿಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಮತ್ತೆ ಪ್ರಾಕೃತಿಕ ವಿಕೋಪ ಮರುಕಳಿಸುತ್ತಾ ಎನ್ನುವ ಭೀತಿ ಉಂಟಾಗಿದೆ.
ಭಾರತೀಯ ಭೂಗರ್ಭ ಶಾಸ್ತ್ರಜ್ಞರು ಸರ್ಕಾರಕ್ಕೆ ಈ ಬಗ್ಗೆ ವರದಿ ಸಲ್ಲಿಸಿದ್ದು, ಈ ಹಿಂದೆ ಪ್ರಾಕೃತಿಕ ವಿಕೋಪ ಸಂಭವಿಸಿದ್ದ ಸ್ಥಳದಲ್ಲೇ ಮತ್ತೆ ಅಪಾಯ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
ಕೊಡಗಿನ 43 ಪ್ರದೇಶಗಳು ಅಪಾಯಕಾರಿ
ಕೊಡಗಿನಲ್ಲಿ ಈ ಹಿಂದೆ ಅನಾಹುತ ಸಂಭವಿಸಿದ ಜಾಗ ಸೇರಿ 43 ಪ್ರದೇಶಗಳು ಅಪಾಯಕಾರಿ ಎಂದು ಎಚ್ಚರಿಕೆ ನೀಡಲಾಗಿದೆ. ಜೊತೆಗೆ, ಹಟ್ಟಿಹೊಳೆ ಕಾವೇರಿ ನದಿ ಹಾಗೂ ಲಕ್ಷ್ಮಣ ತೀರ್ಥ ನದಿಯ ತಟದಲ್ಲಿ ಇರುವವರು ಎಚ್ಚರ ವಹಿಸಬೇಕು ಎಂದು ತಜ್ಞರು ಎಚ್ಚರಿಕೆ ನೀಡಿರುವುದಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ.
ವರದಿಯ ಬೆನ್ನಲ್ಲೇ ಕೊಡಗು ಜಿಲ್ಲಾಡಳಿತ ಈ ಬಾರಿಯ ಮಳೆಗಾಲವನ್ನು ಎದುರಿಸಲು ಸಿದ್ಧತೆ ಮಾಡಿದೆ. ತಜ್ಞರು ಸೂಚಿಸಿದ ಪ್ರದೇಶಗಳಲ್ಲಿ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಿದೆ. ಜನರಿಗೆ ಅಗತ್ಯ ಸೇವೆ ಲಭ್ಯವಿರುವಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಪೊಲೀಸ್ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ, ನೋಡಲ್ ಅಧಿಕಾರಿಗಳು ಹಾಗೂ ಸ್ವಯಂಸೇವಕರನ್ನು ನೇಮಿಸಿಕೊಳ್ಳಲಾಗಿದೆ. ಪ್ರವಾಹ ಎದುರಾಗುವ ಏರಿಯಾದ ಸುತ್ತ 100 ಕ್ಕೂ ಹೆಚ್ಚು ಆಶ್ರಯ ಕೇಂದ್ರಗಳನ್ನು ಆರಂಭಿಸಲು ಚಿಂತನೆ ನಡೆಸಿದ್ದು, ಎಲ್ಲಾ ಮೂಲಭೂತ ಸೌಕರ್ಯ ಸಿದ್ಧಪಡಿಸಿಕೊಳ್ಳಲಾಗಿದೆ. ಜನತೆ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.
Heavy Rainfall in Kodagu This Year; Experts Warn of Potential Natural Disasters.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am