ಬ್ರೇಕಿಂಗ್ ನ್ಯೂಸ್
22-05-25 11:09 pm HK News Desk ಕರ್ನಾಟಕ
ಮಡಿಕೇರಿ, ಮೇ 22 : 2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಕೊಡಗು ಜನರಲ್ಲಿ ಅಕ್ಷರಶಃ ಭೀತಿ ಹುಟ್ಟಿಸಿತ್ತು. ಆನಂತರವೂ ಅಲ್ಲೊಂದು ಇಲ್ಲೊಂದು ಎನ್ನುವಂತೆ ಎಡವಟ್ಟು ಆಗಿತ್ತು. ಈ ಬಾರಿ ಎಂದಿಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಮತ್ತೆ ಪ್ರಾಕೃತಿಕ ವಿಕೋಪ ಮರುಕಳಿಸುತ್ತಾ ಎನ್ನುವ ಭೀತಿ ಉಂಟಾಗಿದೆ.
ಭಾರತೀಯ ಭೂಗರ್ಭ ಶಾಸ್ತ್ರಜ್ಞರು ಸರ್ಕಾರಕ್ಕೆ ಈ ಬಗ್ಗೆ ವರದಿ ಸಲ್ಲಿಸಿದ್ದು, ಈ ಹಿಂದೆ ಪ್ರಾಕೃತಿಕ ವಿಕೋಪ ಸಂಭವಿಸಿದ್ದ ಸ್ಥಳದಲ್ಲೇ ಮತ್ತೆ ಅಪಾಯ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
ಕೊಡಗಿನ 43 ಪ್ರದೇಶಗಳು ಅಪಾಯಕಾರಿ
ಕೊಡಗಿನಲ್ಲಿ ಈ ಹಿಂದೆ ಅನಾಹುತ ಸಂಭವಿಸಿದ ಜಾಗ ಸೇರಿ 43 ಪ್ರದೇಶಗಳು ಅಪಾಯಕಾರಿ ಎಂದು ಎಚ್ಚರಿಕೆ ನೀಡಲಾಗಿದೆ. ಜೊತೆಗೆ, ಹಟ್ಟಿಹೊಳೆ ಕಾವೇರಿ ನದಿ ಹಾಗೂ ಲಕ್ಷ್ಮಣ ತೀರ್ಥ ನದಿಯ ತಟದಲ್ಲಿ ಇರುವವರು ಎಚ್ಚರ ವಹಿಸಬೇಕು ಎಂದು ತಜ್ಞರು ಎಚ್ಚರಿಕೆ ನೀಡಿರುವುದಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ.
ವರದಿಯ ಬೆನ್ನಲ್ಲೇ ಕೊಡಗು ಜಿಲ್ಲಾಡಳಿತ ಈ ಬಾರಿಯ ಮಳೆಗಾಲವನ್ನು ಎದುರಿಸಲು ಸಿದ್ಧತೆ ಮಾಡಿದೆ. ತಜ್ಞರು ಸೂಚಿಸಿದ ಪ್ರದೇಶಗಳಲ್ಲಿ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಿದೆ. ಜನರಿಗೆ ಅಗತ್ಯ ಸೇವೆ ಲಭ್ಯವಿರುವಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಪೊಲೀಸ್ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ, ನೋಡಲ್ ಅಧಿಕಾರಿಗಳು ಹಾಗೂ ಸ್ವಯಂಸೇವಕರನ್ನು ನೇಮಿಸಿಕೊಳ್ಳಲಾಗಿದೆ. ಪ್ರವಾಹ ಎದುರಾಗುವ ಏರಿಯಾದ ಸುತ್ತ 100 ಕ್ಕೂ ಹೆಚ್ಚು ಆಶ್ರಯ ಕೇಂದ್ರಗಳನ್ನು ಆರಂಭಿಸಲು ಚಿಂತನೆ ನಡೆಸಿದ್ದು, ಎಲ್ಲಾ ಮೂಲಭೂತ ಸೌಕರ್ಯ ಸಿದ್ಧಪಡಿಸಿಕೊಳ್ಳಲಾಗಿದೆ. ಜನತೆ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.
Heavy Rainfall in Kodagu This Year; Experts Warn of Potential Natural Disasters.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm