ಬ್ರೇಕಿಂಗ್ ನ್ಯೂಸ್
23-05-25 11:54 am HK News Desk ಕರ್ನಾಟಕ
ಹಾಸನ, ಮೇ 23 : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮತ್ತೊಬ್ಬ ಕೂಲಿಯಾಳು ಮಹಿಳೆಯನ್ನು ಕಾಡಾನೆ ತುಳಿದು ಸಾಯಿಸಿದ ಘಟನೆ ನಡೆದಿದೆ. ಕಾಡಾನೆ ದಾಳಿಗೆ ಬಲಿಯಾದ ಮಹಿಳೆಯನ್ನು ಚಂದ್ರಮ್ಮ (45) ಎಂದು ಗುರುತಿಸಲಾಗಿದೆ.
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಅಂಕಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗಜೇಂದ್ರಪುರ ಗ್ರಾಮದ ಮಹಿಳೆ ಚಂದ್ರಮ್ಮ ಅವರು, ಡಾ.ಕರುಣ್ ಎಂಬವರಿಗೆ ಸೇರಿದ ಕಾಫಿ ತೋಟದಲ್ಲಿ ಇಂದು ಬೆಳಗ್ಗೆ ಕೆಲಸಕ್ಕೆ ತೆರಳಿದ್ದಾಗ ಕಾಡಾನೆ ದಾಳಿ ನಡೆಸಿದೆ.
ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ್ದು ಸೊಂಡಿಲಿನಿಂದ ಎತ್ತಿ ಬಿಸಾಡಿ, ಕಾಲಿನಿಂದ ತುಳಿದು ಬರ್ಬರವಾಗಿ ಸಾಯಿಸಿ ಹಾಕಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಘಟ್ಟಕ್ಕೆ ಹೊಂದಿಕೊಂಡಿರುವ ಹಾಸನ ಜಿಲ್ಲೆಯ ಬೇಲೂರು, ಸಕಲೇಶಪುರ, ಅರಕಲಗೂಡು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು ಜನರು ಭೀತಿಗೊಳಗಾಗಿದ್ದಾರೆ. ಇತ್ತೀಚೆಗೆ ಮೈಸೂರಿನಿಂದ ಸಾಕಾನೆಗಳನ್ನು ತಂದು ಕಾರ್ಯಾಚರಣೆ ನಡೆಸಿದರೂ, ಫಲಕಾರಿಯಾಗಲಿಲ್ಲ.
A wild elephant trampled a woman to death at Ankihalli in Belur taluk on May 23, intensifying the human-elephant conflict in Hassan district of Karnataka. Chandramma, 45, of Gajendrapura encountered the elephant while working in an estate in the village.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am