ಬ್ರೇಕಿಂಗ್ ನ್ಯೂಸ್
23-05-25 02:35 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 23 : ರಾಜ್ಯದಲ್ಲಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಮುಂದಿನ ಅಕ್ಟೋಬರ್, ನವೆಂಬರ್ ತಿಂಗಳ ವೇಳೆಗೆ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿಎಸ್ ಸಂಗ್ರೇಶಿ ತಿಳಿಸಿದ್ದಾರೆ.
ತಿಪಟೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಮಾಹಿತಿ ನೀಡಿದ್ದು, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸರಕಾರ ಮೀಸಲಾತಿ ನಿಗದಿಪಡಿಸಿ ಪಟ್ಟಿಯನ್ನು ನೀಡಬೇಕಿದೆ. ಇದೇ ಮೇ 30ರ ಒಳಗೆ ಸರಕಾರ ಮೀಸಲಾತಿ ಪಟ್ಟಿಯನ್ನು ಆಯೋಗಕ್ಕೆ ನೀಡುವುವಾಗಿ ತಿಳಿಸಿದ್ದು ಅದಕ್ಕಾಗಿ ಕಾಯುತ್ತಿದ್ದೇವೆ. ಮೀಸಲಾತಿ ಪಟ್ಟಿ ನೀಡಿದ ಕೂಡಲೇ ಸಿದ್ಧತೆ ಪ್ರಾರಂಭಿಸುತ್ತೇವೆ. ಸಿದ್ಧತೆ ಹಾಗೂ ಚುನಾವಣಾ ತಯಾರಿಗಾಗಿ 2-3 ತಿಂಗಳು ಬೇಕಾಗುತ್ತದೆ. ಅಂದಾಜು ದಸರಾ ನಂತರ ನವೆಂಬರ್ನಲ್ಲಿ ಜಿಪಂ, ತಾಪಂ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದರು.
ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಕಾರ್ಯಕರ್ತರ ಜೊತೆಗೆ ಮಾತನಾಡುತ್ತ ಡಿಸಿಎಂ ಡಿ.ಕೆ. ಶಿವಕುಮಾರ್, "ನೀವು ವಿಧಾನಸಭಾ ಚುನಾವಣೆಗೆ ದುಡಿದಿದ್ದೀರಿ, ಲೋಕಸಭಾ ಚುನಾವಣೆಗೆ ಸಹ ಶ್ರಮಿಸಿದ್ದೀರಿ. ಸ್ಥಳೀಯ ಸಂಸ್ಥೆಗಳ ಚುನಾವಣೆಯ ಇರುವುದರಿಂದ ಇನ್ನಷ್ಟು ಚುರುಕಿನಿಂದ ಕೆಲಸಕ್ಕೆ ಮುಂದಾಗಬೇಕು " ಎಂದು ಹೇಳಿದ್ದರು. ಶೀಘ್ರವೇ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದೂ ತಿಳಿಸಿದ್ದರು.
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸದಸ್ಯ ಸ್ಥಾನಗಳ ಅವಧಿ ಮುಕ್ತಾಯಗೊಂಡು ಸಾಕಷ್ಟು ಸಮಯವಾಗಿದ್ದು, ಗ್ರಾಮೀಣ ಭಾಗದಲ್ಲಿ ಜನ ಚುನಾವಣೆ ಎದುರು ನೋಡುತ್ತಿದ್ದಾರೆ. ಇದೇ ವೇಳೆ, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ನಿಂದ ಆಕಾಂಕ್ಷಿಗಳು ನೆಟ್ಟಗಾಗಿದ್ದು ಸ್ಥಳೀಯ ಮಟ್ಟದಲ್ಲಿ ವರ್ಚಸ್ಸು ಹೆಚ್ಚಿಸಿಕೊಳ್ಳಲು ತಯಾರಿ ಮಾಡುತ್ತಿದ್ದಾರೆ.
State Election Commission Commissioner GS Sangreshi said that the Taluk Panchayat and Zilla Panchayat elections in the state are likely to be held in October-November.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am