ಬ್ರೇಕಿಂಗ್ ನ್ಯೂಸ್
23-05-25 02:35 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 23 : ರಾಜ್ಯದಲ್ಲಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಮುಂದಿನ ಅಕ್ಟೋಬರ್, ನವೆಂಬರ್ ತಿಂಗಳ ವೇಳೆಗೆ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿಎಸ್ ಸಂಗ್ರೇಶಿ ತಿಳಿಸಿದ್ದಾರೆ.
ತಿಪಟೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಮಾಹಿತಿ ನೀಡಿದ್ದು, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸರಕಾರ ಮೀಸಲಾತಿ ನಿಗದಿಪಡಿಸಿ ಪಟ್ಟಿಯನ್ನು ನೀಡಬೇಕಿದೆ. ಇದೇ ಮೇ 30ರ ಒಳಗೆ ಸರಕಾರ ಮೀಸಲಾತಿ ಪಟ್ಟಿಯನ್ನು ಆಯೋಗಕ್ಕೆ ನೀಡುವುವಾಗಿ ತಿಳಿಸಿದ್ದು ಅದಕ್ಕಾಗಿ ಕಾಯುತ್ತಿದ್ದೇವೆ. ಮೀಸಲಾತಿ ಪಟ್ಟಿ ನೀಡಿದ ಕೂಡಲೇ ಸಿದ್ಧತೆ ಪ್ರಾರಂಭಿಸುತ್ತೇವೆ. ಸಿದ್ಧತೆ ಹಾಗೂ ಚುನಾವಣಾ ತಯಾರಿಗಾಗಿ 2-3 ತಿಂಗಳು ಬೇಕಾಗುತ್ತದೆ. ಅಂದಾಜು ದಸರಾ ನಂತರ ನವೆಂಬರ್ನಲ್ಲಿ ಜಿಪಂ, ತಾಪಂ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದರು.
ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಕಾರ್ಯಕರ್ತರ ಜೊತೆಗೆ ಮಾತನಾಡುತ್ತ ಡಿಸಿಎಂ ಡಿ.ಕೆ. ಶಿವಕುಮಾರ್, "ನೀವು ವಿಧಾನಸಭಾ ಚುನಾವಣೆಗೆ ದುಡಿದಿದ್ದೀರಿ, ಲೋಕಸಭಾ ಚುನಾವಣೆಗೆ ಸಹ ಶ್ರಮಿಸಿದ್ದೀರಿ. ಸ್ಥಳೀಯ ಸಂಸ್ಥೆಗಳ ಚುನಾವಣೆಯ ಇರುವುದರಿಂದ ಇನ್ನಷ್ಟು ಚುರುಕಿನಿಂದ ಕೆಲಸಕ್ಕೆ ಮುಂದಾಗಬೇಕು " ಎಂದು ಹೇಳಿದ್ದರು. ಶೀಘ್ರವೇ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದೂ ತಿಳಿಸಿದ್ದರು.
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸದಸ್ಯ ಸ್ಥಾನಗಳ ಅವಧಿ ಮುಕ್ತಾಯಗೊಂಡು ಸಾಕಷ್ಟು ಸಮಯವಾಗಿದ್ದು, ಗ್ರಾಮೀಣ ಭಾಗದಲ್ಲಿ ಜನ ಚುನಾವಣೆ ಎದುರು ನೋಡುತ್ತಿದ್ದಾರೆ. ಇದೇ ವೇಳೆ, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ನಿಂದ ಆಕಾಂಕ್ಷಿಗಳು ನೆಟ್ಟಗಾಗಿದ್ದು ಸ್ಥಳೀಯ ಮಟ್ಟದಲ್ಲಿ ವರ್ಚಸ್ಸು ಹೆಚ್ಚಿಸಿಕೊಳ್ಳಲು ತಯಾರಿ ಮಾಡುತ್ತಿದ್ದಾರೆ.
State Election Commission Commissioner GS Sangreshi said that the Taluk Panchayat and Zilla Panchayat elections in the state are likely to be held in October-November.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm