ಬ್ರೇಕಿಂಗ್ ನ್ಯೂಸ್
23-05-25 02:35 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 23 : ರಾಜ್ಯದಲ್ಲಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಮುಂದಿನ ಅಕ್ಟೋಬರ್, ನವೆಂಬರ್ ತಿಂಗಳ ವೇಳೆಗೆ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿಎಸ್ ಸಂಗ್ರೇಶಿ ತಿಳಿಸಿದ್ದಾರೆ.
ತಿಪಟೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಮಾಹಿತಿ ನೀಡಿದ್ದು, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸರಕಾರ ಮೀಸಲಾತಿ ನಿಗದಿಪಡಿಸಿ ಪಟ್ಟಿಯನ್ನು ನೀಡಬೇಕಿದೆ. ಇದೇ ಮೇ 30ರ ಒಳಗೆ ಸರಕಾರ ಮೀಸಲಾತಿ ಪಟ್ಟಿಯನ್ನು ಆಯೋಗಕ್ಕೆ ನೀಡುವುವಾಗಿ ತಿಳಿಸಿದ್ದು ಅದಕ್ಕಾಗಿ ಕಾಯುತ್ತಿದ್ದೇವೆ. ಮೀಸಲಾತಿ ಪಟ್ಟಿ ನೀಡಿದ ಕೂಡಲೇ ಸಿದ್ಧತೆ ಪ್ರಾರಂಭಿಸುತ್ತೇವೆ. ಸಿದ್ಧತೆ ಹಾಗೂ ಚುನಾವಣಾ ತಯಾರಿಗಾಗಿ 2-3 ತಿಂಗಳು ಬೇಕಾಗುತ್ತದೆ. ಅಂದಾಜು ದಸರಾ ನಂತರ ನವೆಂಬರ್ನಲ್ಲಿ ಜಿಪಂ, ತಾಪಂ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದರು.
ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಕಾರ್ಯಕರ್ತರ ಜೊತೆಗೆ ಮಾತನಾಡುತ್ತ ಡಿಸಿಎಂ ಡಿ.ಕೆ. ಶಿವಕುಮಾರ್, "ನೀವು ವಿಧಾನಸಭಾ ಚುನಾವಣೆಗೆ ದುಡಿದಿದ್ದೀರಿ, ಲೋಕಸಭಾ ಚುನಾವಣೆಗೆ ಸಹ ಶ್ರಮಿಸಿದ್ದೀರಿ. ಸ್ಥಳೀಯ ಸಂಸ್ಥೆಗಳ ಚುನಾವಣೆಯ ಇರುವುದರಿಂದ ಇನ್ನಷ್ಟು ಚುರುಕಿನಿಂದ ಕೆಲಸಕ್ಕೆ ಮುಂದಾಗಬೇಕು " ಎಂದು ಹೇಳಿದ್ದರು. ಶೀಘ್ರವೇ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದೂ ತಿಳಿಸಿದ್ದರು.
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸದಸ್ಯ ಸ್ಥಾನಗಳ ಅವಧಿ ಮುಕ್ತಾಯಗೊಂಡು ಸಾಕಷ್ಟು ಸಮಯವಾಗಿದ್ದು, ಗ್ರಾಮೀಣ ಭಾಗದಲ್ಲಿ ಜನ ಚುನಾವಣೆ ಎದುರು ನೋಡುತ್ತಿದ್ದಾರೆ. ಇದೇ ವೇಳೆ, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ನಿಂದ ಆಕಾಂಕ್ಷಿಗಳು ನೆಟ್ಟಗಾಗಿದ್ದು ಸ್ಥಳೀಯ ಮಟ್ಟದಲ್ಲಿ ವರ್ಚಸ್ಸು ಹೆಚ್ಚಿಸಿಕೊಳ್ಳಲು ತಯಾರಿ ಮಾಡುತ್ತಿದ್ದಾರೆ.
State Election Commission Commissioner GS Sangreshi said that the Taluk Panchayat and Zilla Panchayat elections in the state are likely to be held in October-November.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm