ಬ್ರೇಕಿಂಗ್ ನ್ಯೂಸ್
23-05-25 02:35 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 23 : ರಾಜ್ಯದಲ್ಲಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಮುಂದಿನ ಅಕ್ಟೋಬರ್, ನವೆಂಬರ್ ತಿಂಗಳ ವೇಳೆಗೆ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿಎಸ್ ಸಂಗ್ರೇಶಿ ತಿಳಿಸಿದ್ದಾರೆ.
ತಿಪಟೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಮಾಹಿತಿ ನೀಡಿದ್ದು, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸರಕಾರ ಮೀಸಲಾತಿ ನಿಗದಿಪಡಿಸಿ ಪಟ್ಟಿಯನ್ನು ನೀಡಬೇಕಿದೆ. ಇದೇ ಮೇ 30ರ ಒಳಗೆ ಸರಕಾರ ಮೀಸಲಾತಿ ಪಟ್ಟಿಯನ್ನು ಆಯೋಗಕ್ಕೆ ನೀಡುವುವಾಗಿ ತಿಳಿಸಿದ್ದು ಅದಕ್ಕಾಗಿ ಕಾಯುತ್ತಿದ್ದೇವೆ. ಮೀಸಲಾತಿ ಪಟ್ಟಿ ನೀಡಿದ ಕೂಡಲೇ ಸಿದ್ಧತೆ ಪ್ರಾರಂಭಿಸುತ್ತೇವೆ. ಸಿದ್ಧತೆ ಹಾಗೂ ಚುನಾವಣಾ ತಯಾರಿಗಾಗಿ 2-3 ತಿಂಗಳು ಬೇಕಾಗುತ್ತದೆ. ಅಂದಾಜು ದಸರಾ ನಂತರ ನವೆಂಬರ್ನಲ್ಲಿ ಜಿಪಂ, ತಾಪಂ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದರು.
ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಕಾರ್ಯಕರ್ತರ ಜೊತೆಗೆ ಮಾತನಾಡುತ್ತ ಡಿಸಿಎಂ ಡಿ.ಕೆ. ಶಿವಕುಮಾರ್, "ನೀವು ವಿಧಾನಸಭಾ ಚುನಾವಣೆಗೆ ದುಡಿದಿದ್ದೀರಿ, ಲೋಕಸಭಾ ಚುನಾವಣೆಗೆ ಸಹ ಶ್ರಮಿಸಿದ್ದೀರಿ. ಸ್ಥಳೀಯ ಸಂಸ್ಥೆಗಳ ಚುನಾವಣೆಯ ಇರುವುದರಿಂದ ಇನ್ನಷ್ಟು ಚುರುಕಿನಿಂದ ಕೆಲಸಕ್ಕೆ ಮುಂದಾಗಬೇಕು " ಎಂದು ಹೇಳಿದ್ದರು. ಶೀಘ್ರವೇ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದೂ ತಿಳಿಸಿದ್ದರು.
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸದಸ್ಯ ಸ್ಥಾನಗಳ ಅವಧಿ ಮುಕ್ತಾಯಗೊಂಡು ಸಾಕಷ್ಟು ಸಮಯವಾಗಿದ್ದು, ಗ್ರಾಮೀಣ ಭಾಗದಲ್ಲಿ ಜನ ಚುನಾವಣೆ ಎದುರು ನೋಡುತ್ತಿದ್ದಾರೆ. ಇದೇ ವೇಳೆ, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ನಿಂದ ಆಕಾಂಕ್ಷಿಗಳು ನೆಟ್ಟಗಾಗಿದ್ದು ಸ್ಥಳೀಯ ಮಟ್ಟದಲ್ಲಿ ವರ್ಚಸ್ಸು ಹೆಚ್ಚಿಸಿಕೊಳ್ಳಲು ತಯಾರಿ ಮಾಡುತ್ತಿದ್ದಾರೆ.
State Election Commission Commissioner GS Sangreshi said that the Taluk Panchayat and Zilla Panchayat elections in the state are likely to be held in October-November.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm