ಬ್ರೇಕಿಂಗ್ ನ್ಯೂಸ್
23-05-25 02:35 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 23 : ರಾಜ್ಯದಲ್ಲಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಮುಂದಿನ ಅಕ್ಟೋಬರ್, ನವೆಂಬರ್ ತಿಂಗಳ ವೇಳೆಗೆ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿಎಸ್ ಸಂಗ್ರೇಶಿ ತಿಳಿಸಿದ್ದಾರೆ.
ತಿಪಟೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಮಾಹಿತಿ ನೀಡಿದ್ದು, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸರಕಾರ ಮೀಸಲಾತಿ ನಿಗದಿಪಡಿಸಿ ಪಟ್ಟಿಯನ್ನು ನೀಡಬೇಕಿದೆ. ಇದೇ ಮೇ 30ರ ಒಳಗೆ ಸರಕಾರ ಮೀಸಲಾತಿ ಪಟ್ಟಿಯನ್ನು ಆಯೋಗಕ್ಕೆ ನೀಡುವುವಾಗಿ ತಿಳಿಸಿದ್ದು ಅದಕ್ಕಾಗಿ ಕಾಯುತ್ತಿದ್ದೇವೆ. ಮೀಸಲಾತಿ ಪಟ್ಟಿ ನೀಡಿದ ಕೂಡಲೇ ಸಿದ್ಧತೆ ಪ್ರಾರಂಭಿಸುತ್ತೇವೆ. ಸಿದ್ಧತೆ ಹಾಗೂ ಚುನಾವಣಾ ತಯಾರಿಗಾಗಿ 2-3 ತಿಂಗಳು ಬೇಕಾಗುತ್ತದೆ. ಅಂದಾಜು ದಸರಾ ನಂತರ ನವೆಂಬರ್ನಲ್ಲಿ ಜಿಪಂ, ತಾಪಂ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದರು.
ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಕಾರ್ಯಕರ್ತರ ಜೊತೆಗೆ ಮಾತನಾಡುತ್ತ ಡಿಸಿಎಂ ಡಿ.ಕೆ. ಶಿವಕುಮಾರ್, "ನೀವು ವಿಧಾನಸಭಾ ಚುನಾವಣೆಗೆ ದುಡಿದಿದ್ದೀರಿ, ಲೋಕಸಭಾ ಚುನಾವಣೆಗೆ ಸಹ ಶ್ರಮಿಸಿದ್ದೀರಿ. ಸ್ಥಳೀಯ ಸಂಸ್ಥೆಗಳ ಚುನಾವಣೆಯ ಇರುವುದರಿಂದ ಇನ್ನಷ್ಟು ಚುರುಕಿನಿಂದ ಕೆಲಸಕ್ಕೆ ಮುಂದಾಗಬೇಕು " ಎಂದು ಹೇಳಿದ್ದರು. ಶೀಘ್ರವೇ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದೂ ತಿಳಿಸಿದ್ದರು.
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸದಸ್ಯ ಸ್ಥಾನಗಳ ಅವಧಿ ಮುಕ್ತಾಯಗೊಂಡು ಸಾಕಷ್ಟು ಸಮಯವಾಗಿದ್ದು, ಗ್ರಾಮೀಣ ಭಾಗದಲ್ಲಿ ಜನ ಚುನಾವಣೆ ಎದುರು ನೋಡುತ್ತಿದ್ದಾರೆ. ಇದೇ ವೇಳೆ, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ನಿಂದ ಆಕಾಂಕ್ಷಿಗಳು ನೆಟ್ಟಗಾಗಿದ್ದು ಸ್ಥಳೀಯ ಮಟ್ಟದಲ್ಲಿ ವರ್ಚಸ್ಸು ಹೆಚ್ಚಿಸಿಕೊಳ್ಳಲು ತಯಾರಿ ಮಾಡುತ್ತಿದ್ದಾರೆ.
State Election Commission Commissioner GS Sangreshi said that the Taluk Panchayat and Zilla Panchayat elections in the state are likely to be held in October-November.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am