ಬ್ರೇಕಿಂಗ್ ನ್ಯೂಸ್
23-05-25 02:35 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 23 : ರಾಜ್ಯದಲ್ಲಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಮುಂದಿನ ಅಕ್ಟೋಬರ್, ನವೆಂಬರ್ ತಿಂಗಳ ವೇಳೆಗೆ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿಎಸ್ ಸಂಗ್ರೇಶಿ ತಿಳಿಸಿದ್ದಾರೆ.
ತಿಪಟೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಮಾಹಿತಿ ನೀಡಿದ್ದು, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸರಕಾರ ಮೀಸಲಾತಿ ನಿಗದಿಪಡಿಸಿ ಪಟ್ಟಿಯನ್ನು ನೀಡಬೇಕಿದೆ. ಇದೇ ಮೇ 30ರ ಒಳಗೆ ಸರಕಾರ ಮೀಸಲಾತಿ ಪಟ್ಟಿಯನ್ನು ಆಯೋಗಕ್ಕೆ ನೀಡುವುವಾಗಿ ತಿಳಿಸಿದ್ದು ಅದಕ್ಕಾಗಿ ಕಾಯುತ್ತಿದ್ದೇವೆ. ಮೀಸಲಾತಿ ಪಟ್ಟಿ ನೀಡಿದ ಕೂಡಲೇ ಸಿದ್ಧತೆ ಪ್ರಾರಂಭಿಸುತ್ತೇವೆ. ಸಿದ್ಧತೆ ಹಾಗೂ ಚುನಾವಣಾ ತಯಾರಿಗಾಗಿ 2-3 ತಿಂಗಳು ಬೇಕಾಗುತ್ತದೆ. ಅಂದಾಜು ದಸರಾ ನಂತರ ನವೆಂಬರ್ನಲ್ಲಿ ಜಿಪಂ, ತಾಪಂ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದರು.
ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಕಾರ್ಯಕರ್ತರ ಜೊತೆಗೆ ಮಾತನಾಡುತ್ತ ಡಿಸಿಎಂ ಡಿ.ಕೆ. ಶಿವಕುಮಾರ್, "ನೀವು ವಿಧಾನಸಭಾ ಚುನಾವಣೆಗೆ ದುಡಿದಿದ್ದೀರಿ, ಲೋಕಸಭಾ ಚುನಾವಣೆಗೆ ಸಹ ಶ್ರಮಿಸಿದ್ದೀರಿ. ಸ್ಥಳೀಯ ಸಂಸ್ಥೆಗಳ ಚುನಾವಣೆಯ ಇರುವುದರಿಂದ ಇನ್ನಷ್ಟು ಚುರುಕಿನಿಂದ ಕೆಲಸಕ್ಕೆ ಮುಂದಾಗಬೇಕು " ಎಂದು ಹೇಳಿದ್ದರು. ಶೀಘ್ರವೇ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದೂ ತಿಳಿಸಿದ್ದರು.
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸದಸ್ಯ ಸ್ಥಾನಗಳ ಅವಧಿ ಮುಕ್ತಾಯಗೊಂಡು ಸಾಕಷ್ಟು ಸಮಯವಾಗಿದ್ದು, ಗ್ರಾಮೀಣ ಭಾಗದಲ್ಲಿ ಜನ ಚುನಾವಣೆ ಎದುರು ನೋಡುತ್ತಿದ್ದಾರೆ. ಇದೇ ವೇಳೆ, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ನಿಂದ ಆಕಾಂಕ್ಷಿಗಳು ನೆಟ್ಟಗಾಗಿದ್ದು ಸ್ಥಳೀಯ ಮಟ್ಟದಲ್ಲಿ ವರ್ಚಸ್ಸು ಹೆಚ್ಚಿಸಿಕೊಳ್ಳಲು ತಯಾರಿ ಮಾಡುತ್ತಿದ್ದಾರೆ.
State Election Commission Commissioner GS Sangreshi said that the Taluk Panchayat and Zilla Panchayat elections in the state are likely to be held in October-November.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm