ಬ್ರೇಕಿಂಗ್ ನ್ಯೂಸ್
24-05-25 07:45 pm HK News Desk ಕರ್ನಾಟಕ
ಮೈಸೂರು, ಮೇ 24 : ಮಗಳು ಪ್ರಿಯಕರನ ಜೊತೆ ಮನೆ ಬಿಟ್ಟು ಹೋದ ಕಾರಣ ಮನನೊಂದು ಒಂದೇ ಕುಟುಂಬದ ಮೂರು ಜನ ಹೆಬ್ಬಾಳ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದ ನಿವಾಸಿಗಳಾದ ಮಹಾದೇವ ಸ್ವಾಮಿ (55) ಮಂಜುಳಾ (45) ಹಾಗೂ ಇವರ ಕಿರಿಯ ಮಗಳು ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡವರು.

ಇವರೆಲ್ಲ ತಾಲೂಕಿನ ಬುದನೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಇಂದು ಬೆಳಗ್ಗೆ ಬೈಕ್ನಲ್ಲಿ ಜಲಾಶಯಕ್ಕೆ ಬಂದ ಇವರು ಬೈಕ್ ನಿಲ್ಲಿಸಿ, ಅಲ್ಲೆ ಚಪ್ಪಲಿ ಬಿಟ್ಟು ಡೆತ್ನೋಟ್ ಬರೆದಿಟ್ಟು ನೀರಿಗೆ ಹಾರಿದ್ದಾರೆ.
ಈ ಮಾರ್ಗವಾಗಿ ಹೋಗುತ್ತಿದ್ದ ಅದೇ ಗ್ರಾಮಸ್ಥರು ಬೈಕ್ ಗಮನಿಸಿ ಹತ್ತಿರ ಬಂದಾಗ ವಿಷಯ ತಿಳಿದಿದೆ. ತಕ್ಷಣ ಗ್ರಾಮಸ್ಥರು ಎಚ್.ಡಿ.ಕೋಟೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಮೂವರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರಿಕ್ಷೆಗೆ ಎಚ್.ಡಿ.ಕೋಟಿ ಶವಾಗಾರಕ್ಕೆ ಕಳುಹಿಸಿದ್ದಾರೆ.
ಇತ್ತೀಚೆಗೆ ಮಹಾದೇವಸ್ವಾಮಿ ದಂಪತಿಯ ಮೊದಲ ಮಗಳು ಪ್ರೀತಿಸಿ ಮದುವೆಯಾಗಲು ಮನೆಬಿಟ್ಟು ಹೋದ ಕಾರಣ ಮರ್ಯಾದೆಗೆ ಅಂಜಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ಡೆತ್ನೋಟ್ನಲ್ಲಿ ಬರೆಯಲಾಗಿದೆ ಎಂದು ಪೊಲೀಸ್ ಮೂಲಗಳು ಖಚಿತ ಪಡಿಸಿವೆ.
ಈ ಬಗ್ಗೆ ತನಿಖೆಯಿಂದ ಹೆಚ್ಚಿನ ವಿಷಯ ತಿಳಿದು ಬರಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಈಟಿವಿ ಭಾರತ್ಗೆ ಮಾಹಿತಿ ನೀಡಿದರು.
Girl Elopes with Lover; Three Family Members Die by Suicide in Mysuru, Shaken by Shame.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm