ಬ್ರೇಕಿಂಗ್ ನ್ಯೂಸ್
24-05-25 07:45 pm HK News Desk ಕರ್ನಾಟಕ
ಮೈಸೂರು, ಮೇ 24 : ಮಗಳು ಪ್ರಿಯಕರನ ಜೊತೆ ಮನೆ ಬಿಟ್ಟು ಹೋದ ಕಾರಣ ಮನನೊಂದು ಒಂದೇ ಕುಟುಂಬದ ಮೂರು ಜನ ಹೆಬ್ಬಾಳ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದ ನಿವಾಸಿಗಳಾದ ಮಹಾದೇವ ಸ್ವಾಮಿ (55) ಮಂಜುಳಾ (45) ಹಾಗೂ ಇವರ ಕಿರಿಯ ಮಗಳು ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡವರು.

ಇವರೆಲ್ಲ ತಾಲೂಕಿನ ಬುದನೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಇಂದು ಬೆಳಗ್ಗೆ ಬೈಕ್ನಲ್ಲಿ ಜಲಾಶಯಕ್ಕೆ ಬಂದ ಇವರು ಬೈಕ್ ನಿಲ್ಲಿಸಿ, ಅಲ್ಲೆ ಚಪ್ಪಲಿ ಬಿಟ್ಟು ಡೆತ್ನೋಟ್ ಬರೆದಿಟ್ಟು ನೀರಿಗೆ ಹಾರಿದ್ದಾರೆ.
ಈ ಮಾರ್ಗವಾಗಿ ಹೋಗುತ್ತಿದ್ದ ಅದೇ ಗ್ರಾಮಸ್ಥರು ಬೈಕ್ ಗಮನಿಸಿ ಹತ್ತಿರ ಬಂದಾಗ ವಿಷಯ ತಿಳಿದಿದೆ. ತಕ್ಷಣ ಗ್ರಾಮಸ್ಥರು ಎಚ್.ಡಿ.ಕೋಟೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಮೂವರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರಿಕ್ಷೆಗೆ ಎಚ್.ಡಿ.ಕೋಟಿ ಶವಾಗಾರಕ್ಕೆ ಕಳುಹಿಸಿದ್ದಾರೆ.
ಇತ್ತೀಚೆಗೆ ಮಹಾದೇವಸ್ವಾಮಿ ದಂಪತಿಯ ಮೊದಲ ಮಗಳು ಪ್ರೀತಿಸಿ ಮದುವೆಯಾಗಲು ಮನೆಬಿಟ್ಟು ಹೋದ ಕಾರಣ ಮರ್ಯಾದೆಗೆ ಅಂಜಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ಡೆತ್ನೋಟ್ನಲ್ಲಿ ಬರೆಯಲಾಗಿದೆ ಎಂದು ಪೊಲೀಸ್ ಮೂಲಗಳು ಖಚಿತ ಪಡಿಸಿವೆ.
ಈ ಬಗ್ಗೆ ತನಿಖೆಯಿಂದ ಹೆಚ್ಚಿನ ವಿಷಯ ತಿಳಿದು ಬರಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಈಟಿವಿ ಭಾರತ್ಗೆ ಮಾಹಿತಿ ನೀಡಿದರು.
Girl Elopes with Lover; Three Family Members Die by Suicide in Mysuru, Shaken by Shame.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am