ಬ್ರೇಕಿಂಗ್ ನ್ಯೂಸ್
24-05-25 07:45 pm HK News Desk ಕರ್ನಾಟಕ
ಮೈಸೂರು, ಮೇ 24 : ಮಗಳು ಪ್ರಿಯಕರನ ಜೊತೆ ಮನೆ ಬಿಟ್ಟು ಹೋದ ಕಾರಣ ಮನನೊಂದು ಒಂದೇ ಕುಟುಂಬದ ಮೂರು ಜನ ಹೆಬ್ಬಾಳ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದ ನಿವಾಸಿಗಳಾದ ಮಹಾದೇವ ಸ್ವಾಮಿ (55) ಮಂಜುಳಾ (45) ಹಾಗೂ ಇವರ ಕಿರಿಯ ಮಗಳು ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡವರು.

ಇವರೆಲ್ಲ ತಾಲೂಕಿನ ಬುದನೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಇಂದು ಬೆಳಗ್ಗೆ ಬೈಕ್ನಲ್ಲಿ ಜಲಾಶಯಕ್ಕೆ ಬಂದ ಇವರು ಬೈಕ್ ನಿಲ್ಲಿಸಿ, ಅಲ್ಲೆ ಚಪ್ಪಲಿ ಬಿಟ್ಟು ಡೆತ್ನೋಟ್ ಬರೆದಿಟ್ಟು ನೀರಿಗೆ ಹಾರಿದ್ದಾರೆ.
ಈ ಮಾರ್ಗವಾಗಿ ಹೋಗುತ್ತಿದ್ದ ಅದೇ ಗ್ರಾಮಸ್ಥರು ಬೈಕ್ ಗಮನಿಸಿ ಹತ್ತಿರ ಬಂದಾಗ ವಿಷಯ ತಿಳಿದಿದೆ. ತಕ್ಷಣ ಗ್ರಾಮಸ್ಥರು ಎಚ್.ಡಿ.ಕೋಟೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಮೂವರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರಿಕ್ಷೆಗೆ ಎಚ್.ಡಿ.ಕೋಟಿ ಶವಾಗಾರಕ್ಕೆ ಕಳುಹಿಸಿದ್ದಾರೆ.
ಇತ್ತೀಚೆಗೆ ಮಹಾದೇವಸ್ವಾಮಿ ದಂಪತಿಯ ಮೊದಲ ಮಗಳು ಪ್ರೀತಿಸಿ ಮದುವೆಯಾಗಲು ಮನೆಬಿಟ್ಟು ಹೋದ ಕಾರಣ ಮರ್ಯಾದೆಗೆ ಅಂಜಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ಡೆತ್ನೋಟ್ನಲ್ಲಿ ಬರೆಯಲಾಗಿದೆ ಎಂದು ಪೊಲೀಸ್ ಮೂಲಗಳು ಖಚಿತ ಪಡಿಸಿವೆ.
ಈ ಬಗ್ಗೆ ತನಿಖೆಯಿಂದ ಹೆಚ್ಚಿನ ವಿಷಯ ತಿಳಿದು ಬರಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಈಟಿವಿ ಭಾರತ್ಗೆ ಮಾಹಿತಿ ನೀಡಿದರು.
Girl Elopes with Lover; Three Family Members Die by Suicide in Mysuru, Shaken by Shame.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm