ಬ್ರೇಕಿಂಗ್ ನ್ಯೂಸ್
24-05-25 07:45 pm HK News Desk ಕರ್ನಾಟಕ
ಮೈಸೂರು, ಮೇ 24 : ಮಗಳು ಪ್ರಿಯಕರನ ಜೊತೆ ಮನೆ ಬಿಟ್ಟು ಹೋದ ಕಾರಣ ಮನನೊಂದು ಒಂದೇ ಕುಟುಂಬದ ಮೂರು ಜನ ಹೆಬ್ಬಾಳ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದ ನಿವಾಸಿಗಳಾದ ಮಹಾದೇವ ಸ್ವಾಮಿ (55) ಮಂಜುಳಾ (45) ಹಾಗೂ ಇವರ ಕಿರಿಯ ಮಗಳು ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡವರು.

ಇವರೆಲ್ಲ ತಾಲೂಕಿನ ಬುದನೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಇಂದು ಬೆಳಗ್ಗೆ ಬೈಕ್ನಲ್ಲಿ ಜಲಾಶಯಕ್ಕೆ ಬಂದ ಇವರು ಬೈಕ್ ನಿಲ್ಲಿಸಿ, ಅಲ್ಲೆ ಚಪ್ಪಲಿ ಬಿಟ್ಟು ಡೆತ್ನೋಟ್ ಬರೆದಿಟ್ಟು ನೀರಿಗೆ ಹಾರಿದ್ದಾರೆ.
ಈ ಮಾರ್ಗವಾಗಿ ಹೋಗುತ್ತಿದ್ದ ಅದೇ ಗ್ರಾಮಸ್ಥರು ಬೈಕ್ ಗಮನಿಸಿ ಹತ್ತಿರ ಬಂದಾಗ ವಿಷಯ ತಿಳಿದಿದೆ. ತಕ್ಷಣ ಗ್ರಾಮಸ್ಥರು ಎಚ್.ಡಿ.ಕೋಟೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಮೂವರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರಿಕ್ಷೆಗೆ ಎಚ್.ಡಿ.ಕೋಟಿ ಶವಾಗಾರಕ್ಕೆ ಕಳುಹಿಸಿದ್ದಾರೆ.
ಇತ್ತೀಚೆಗೆ ಮಹಾದೇವಸ್ವಾಮಿ ದಂಪತಿಯ ಮೊದಲ ಮಗಳು ಪ್ರೀತಿಸಿ ಮದುವೆಯಾಗಲು ಮನೆಬಿಟ್ಟು ಹೋದ ಕಾರಣ ಮರ್ಯಾದೆಗೆ ಅಂಜಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ಡೆತ್ನೋಟ್ನಲ್ಲಿ ಬರೆಯಲಾಗಿದೆ ಎಂದು ಪೊಲೀಸ್ ಮೂಲಗಳು ಖಚಿತ ಪಡಿಸಿವೆ.
ಈ ಬಗ್ಗೆ ತನಿಖೆಯಿಂದ ಹೆಚ್ಚಿನ ವಿಷಯ ತಿಳಿದು ಬರಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಈಟಿವಿ ಭಾರತ್ಗೆ ಮಾಹಿತಿ ನೀಡಿದರು.
Girl Elopes with Lover; Three Family Members Die by Suicide in Mysuru, Shaken by Shame.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am