ಬ್ರೇಕಿಂಗ್ ನ್ಯೂಸ್
24-05-25 07:45 pm HK News Desk ಕರ್ನಾಟಕ
ಮೈಸೂರು, ಮೇ 24 : ಮಗಳು ಪ್ರಿಯಕರನ ಜೊತೆ ಮನೆ ಬಿಟ್ಟು ಹೋದ ಕಾರಣ ಮನನೊಂದು ಒಂದೇ ಕುಟುಂಬದ ಮೂರು ಜನ ಹೆಬ್ಬಾಳ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದ ನಿವಾಸಿಗಳಾದ ಮಹಾದೇವ ಸ್ವಾಮಿ (55) ಮಂಜುಳಾ (45) ಹಾಗೂ ಇವರ ಕಿರಿಯ ಮಗಳು ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡವರು.

ಇವರೆಲ್ಲ ತಾಲೂಕಿನ ಬುದನೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಇಂದು ಬೆಳಗ್ಗೆ ಬೈಕ್ನಲ್ಲಿ ಜಲಾಶಯಕ್ಕೆ ಬಂದ ಇವರು ಬೈಕ್ ನಿಲ್ಲಿಸಿ, ಅಲ್ಲೆ ಚಪ್ಪಲಿ ಬಿಟ್ಟು ಡೆತ್ನೋಟ್ ಬರೆದಿಟ್ಟು ನೀರಿಗೆ ಹಾರಿದ್ದಾರೆ.
ಈ ಮಾರ್ಗವಾಗಿ ಹೋಗುತ್ತಿದ್ದ ಅದೇ ಗ್ರಾಮಸ್ಥರು ಬೈಕ್ ಗಮನಿಸಿ ಹತ್ತಿರ ಬಂದಾಗ ವಿಷಯ ತಿಳಿದಿದೆ. ತಕ್ಷಣ ಗ್ರಾಮಸ್ಥರು ಎಚ್.ಡಿ.ಕೋಟೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಮೂವರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರಿಕ್ಷೆಗೆ ಎಚ್.ಡಿ.ಕೋಟಿ ಶವಾಗಾರಕ್ಕೆ ಕಳುಹಿಸಿದ್ದಾರೆ.
ಇತ್ತೀಚೆಗೆ ಮಹಾದೇವಸ್ವಾಮಿ ದಂಪತಿಯ ಮೊದಲ ಮಗಳು ಪ್ರೀತಿಸಿ ಮದುವೆಯಾಗಲು ಮನೆಬಿಟ್ಟು ಹೋದ ಕಾರಣ ಮರ್ಯಾದೆಗೆ ಅಂಜಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ಡೆತ್ನೋಟ್ನಲ್ಲಿ ಬರೆಯಲಾಗಿದೆ ಎಂದು ಪೊಲೀಸ್ ಮೂಲಗಳು ಖಚಿತ ಪಡಿಸಿವೆ.
ಈ ಬಗ್ಗೆ ತನಿಖೆಯಿಂದ ಹೆಚ್ಚಿನ ವಿಷಯ ತಿಳಿದು ಬರಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಈಟಿವಿ ಭಾರತ್ಗೆ ಮಾಹಿತಿ ನೀಡಿದರು.
Girl Elopes with Lover; Three Family Members Die by Suicide in Mysuru, Shaken by Shame.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm