ಬ್ರೇಕಿಂಗ್ ನ್ಯೂಸ್
25-05-25 08:48 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 25 : ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ತಿಳಿಸಿದ್ದಾರೆ. ಈ ಬಗ್ಗೆ ಸ್ಪೀಕರ್ ಮತ್ತು ಸಿಎಂ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಪ್ರತಿಗಳನ್ನು ಹರಿದು ಅವರ ಮೇಲೆ ಎಸೆದ ಆರೋಪದಲ್ಲಿ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತು ಮಾಡಲಾಗಿತ್ತು. ಈ ಬಗ್ಗೆ ಬಿಜೆಪಿ ಶಾಸಕರು ಮತ್ತು ಇತರ ಹಿರಿಯ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದರು.
ಇಂದು ಸಭೆಯ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಘಟನೆ ಬಗ್ಗೆ ಎಲ್ಲ ಶಾಸಕರು ವಿಷಾದ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕರು ಕೂಡ ನನಗೆ ಮನವಿ ಸಲ್ಲಿಸಿದ್ದರು. ಇನ್ಮುಂದೆ ಹೀಗಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. 18 ಶಾಸಕರನ್ನು ಅಮಾನತು ಮಾಡಿ ಎರಡು ತಿಂಗಳಾಗಿದೆ. ಈಗ ಅಮಾನತು ಆದೇಶ ಹಿಂಪಡೆದಿದ್ದೇನೆ. ಯಾವುದೇ ಷರತ್ತು ಇಲ್ಲ, ಎಲ್ಲರೂ ನಮ್ಮ ಮಿತ್ರರು. ಆ ಸಮಯದಲ್ಲಿ ದುರ್ನಡತೆ ತೋರಿದ್ದಕ್ಕೆ ಕ್ರಮ ಕೈಗೊಂಡಿದ್ದೆವು ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ಸಂಧಾನ ಸಭೆ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಆರ್. ಅಶೋಕ್, ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ, ಕಾನೂನು ಸಚಿವ ಎಚ್.ಕೆ.ಪಾಟೀಲ್ ಭಾಗಿಯಾಗಿದ್ದರು. ಸ್ಪೀಕರ್ ಖಾದರ್ ಇಂದು ರಾತ್ರಿಯೇ ಹಜ್ ಯಾತ್ರೆ ಕೈಗೊಳ್ಳಲಿದ್ದು ಅದಕ್ಕೂ ಮೊದಲೇ ಬಿಜೆಪಿಗೆ ಸಿಹಿಸುದ್ದಿ ನೀಡಿದಂತಾಗಿದೆ.
The state government has withdrawn suspension orders of 18 BJP MLAs on Sunday, May 25. This decision was taken in a mediation meeting held under the chairmanship of Assembly Speaker U.T. Khader.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm